Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:3 - ಕನ್ನಡ ಸತ್ಯವೇದವು C.L. Bible (BSI)

3 ಟೈರ್ ಪಟ್ಟಣವು ತನ್ನ ಸುತ್ತಲೂ ಗೋಡೆಯನ್ನು ಕಟ್ಟಿಕೊಂಡಿದೆ. ಬೆಳ್ಳಿಯನ್ನು ಮಣ್ಣುಮಸಿಯಂತೆ, ಬಂಗಾರವನ್ನು ಕಡ್ಡಿಕಸದಂತೆ ರಾಶಿಮಾಡಿಟ್ಟುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ದೂಳಿನಂತೆಯೂ ಬಂಗಾರವನ್ನು ಬೀದಿಯ ಬದಿಯಂತೆಯೂ ರಾಶಿರಾಶಿ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ಧೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಟೈರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು, ಬೆಳ್ಳಿಯನ್ನು ಧೂಳಿನಂತೆಯೂ, ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:3
16 ತಿಳಿವುಗಳ ಹೋಲಿಕೆ  

ಅಪಾರ ಐಶ್ವರ್ಯದಿಂದ, ವಾಣಿಜ್ಯ ದಿನಸುಗಳಿಂದ ನೀನು ತುಂಬಿಸಿದೆ ಬಹುರಾಷ್ಟ್ರಗಳನು, ಸಮೃದ್ಧಿಗೊಳಿಸಿದೆ ಭೂರಾಜರನು. ಈಗಾಗಿವೆ ಸಮುದ್ರದ ಪಾಲು ಆ ಸರಕು ಸಾಮಗ್ರಿಗಳೆಲ್ಲವು.


ಅವನು ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ ಧೂಳಿನಷ್ಟು, ವಸ್ತ್ರಗಳನು ಗುಡ್ಡೆ ಮಾಡಿಟ್ಟಿದ್ದರೂ ಮಣ್ಣಿನಷ್ಟು.


ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.


ಅಲ್ಲಿಂದ ಅದು ತಿರುಗಿಕೊಂಡು ರಾಮಾ, ಟೈರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರತೀರದಲ್ಲಿ ಕೊನೆಗೊಳ್ಳುತ್ತದೆ.


ಇದರ ವ್ಯಾಪಾರಿಗಳು ವಿಶ್ವವಿಖ್ಯಾತರು. ಇಂಥ ಟೈರ್ ಪಟ್ಟಣಕ್ಕೆ ನಾಶವೊದಗಿದುದನ್ನು ಯೋಚಿಸಿದವರಾರು?


ಎಸೆದುಬಿಡು ನಿನ್ನ ಬಂಗಾರವನು ಧೂಳಿಗೆ ಓಫಿರ್ ನಾಡಿನ ಅಪರಂಜಿಯನು ನದಿತೀರದ ಕಲ್ಲುಗಳಿಗೆ.


ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು.


ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ವಿನೋದಭವನಗಳನ್ನು ಕೆಡವಿ, ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.


ಮುಳುಗಿಹೋದರು ಅಗಾಧ ಜಲದೊಳು ಸರಕುಸಮೇತ ನಿನ್ನ ಸೇರಿದ್ದ ಜನರು; ಹಾಳಾದೆ ನೀನು ಸಮುದ್ರ ಸಾಗರದೊಳು.


ಮನೆಗಳಲ್ಲಿ ತಮಗಾಗಿ ಬೆಳ್ಳಿಬಂಗಾರಗಳನ್ನು ತುಂಬಿಸಿಕೊಂಡಿದ್ದ ಅಧಿಪತಿಗಳೊಡನೆ ನಾನು ಶ್ರಮಿಸುತ್ತಿದ್ದೆ.


ವಿನಾಶದಿನದೊಳು ಮುಳುಗಿಹೋಗುವುವು ಸಮುದ್ರದೊಳು ನಿನ್ನ ಆಸ್ತಿ, ನಿನ್ನ ದಿನಸು, ನಿನ್ನ ಸರಕುಗಳು ನಿನ್ನ ನಾವಿಕರು, ಅಂಬಿಗರು, ಕಂಡಿ ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ಸೈನಿಕರೆಲ್ಲರು, ನಿನ್ನ ಸಿಬ್ಬಂದಿಯೆಲ್ಲವು.


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸದರು -


ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು