Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:7 - ಕನ್ನಡ ಸತ್ಯವೇದವು C.L. Bible (BSI)

7 ಅವರು ಕಚ್ಚುವ ನಿಷಿದ್ಧ ಪದಾರ್ಥಗಳನ್ನು ಅವರ ಹಲ್ಲುಗಳಿಂದ ಕಿತ್ತುಹಾಕುವೆನು. ಅವರು ಸಹ ಇಸ್ರಯೇಲಿನ ದೇವರಿಗೆ ಮೀಸಲಾದ ಜನರಾಗುವರು; ಯೆಹೂದ್ಯ ಕುಲಗಳಲ್ಲಿ ಒಂದಾಗುವರು. ಎಕ್ರೋಮಿನವರು ಯೆಬೂಸಿಯರಂತೆ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಶೇಷಜನವಾಗಿ ನಿಲ್ಲುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ನಿಷಿದ್ಧ ಆಹಾರಪದಾರ್ಥವನ್ನಾಗಲಿ ರಕ್ತದಿಂದಿರುವ ಮಾಂಸವನ್ನಾಗಲಿ ಇನ್ನು ಮುಂದೆ ತಿನ್ನುವದಿಲ್ಲ. ಪಿಲಿಷ್ಟಿಯರಲ್ಲಿ ಯಾರಾದರೂ ಉಳಿದರೆ ಅವರು ನನ್ನ ಜನರೊಂದಿಗೆ ಒಂದಾಗುವರು. ಎಕ್ರೋನಿನ ಯೆಬೂಸಿಯರಂತೆ ಅವರು ಯೆಹೊದದ ಇನ್ನೊಂದು ಸಂತತಿಯವರಾಗುವರು. ನಾನು ನನ್ನ ದೇಶವನ್ನು ಸಂರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ರಕ್ತವನ್ನು ಅವರ ಬಾಯೊಳಗಿಂದಲೂ, ಅವರು ಕಚ್ಚುವ ಅಸಹ್ಯ ಪದಾರ್ಥಗಳನ್ನು ನಾನು ತೆಗೆದುಹಾಕಿಬಿಡುವೆನು. ಅವರು ಸಹ ನಮ್ಮ ದೇವರಿಗಾಗಿ ಉಳಿಯುವರು. ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವರು. ಎಕ್ರೋನು ಯೆಬೂಸಿಯನ ಹಾಗೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:7
21 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು.


ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


ಮುರಿದುಬಿಡು ಹೇ ದೇವಾ, ಆ ದುರುಳರ ಹಲ್ಲುಗಳನು I ಕಿತ್ತುಬಿಡು ಪ್ರಭು, ಆ ಪ್ರಾಯಸಿಂಹಗಳ ಕೋರೆಗಳನು II


ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು. ಸರ್ವೇಶ್ವರ ಇಂತೆನ್ನುತ್ತಾರೆ: “ಫಿಲಿಷ್ಟಿಯದ ಗರ್ವವನ್ನು ಅಡಗಿಸುವೆನು. ಅವರು ಸವಿಯುವ ರಕ್ತಸಿಕ್ತ ಮಾಂಸವನ್ನು ಅವರ ಬಾಯಿಂದ ಕಕ್ಕಿಸುವೆನು.


ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”


ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾರೆ, ಗುಪ್ತಸ್ಥಳಗಳಲ್ಲಿ ರಾತ್ರಿಯನ್ನು ಕಳೆಯುತ್ತಾರೆ, ಹಂದಿಯ ಮಾಂಸವನ್ನು ತಿನ್ನುತ್ತಾರೆ, ಅಸಹ್ಯ ಪದಾರ್ಥಗಳ ಸಾರವನ್ನು ತಟ್ಟೆಗಳಲ್ಲಿ ಬಡಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು