Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:16 - ಕನ್ನಡ ಸತ್ಯವೇದವು C.L. Bible (BSI)

16 ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:16
9 ತಿಳಿವುಗಳ ಹೋಲಿಕೆ  

ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.


ಕೇಡು ಮಾಡದಿದ್ದರೆ ಆ ದುರುಳರಿಗೆ ನಿದ್ರೆಬಾರದು, ವಂಚಿಸಿ ಬೀಳಿಸದಿದ್ದರೆ ಅವರಿಗೆ ನಿದ್ರೆ ಹತ್ತದು.


ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ಒಡನೆ ಕಿನ್ನರಿಯನ್ನು ಬಾರಿಸುತ್ತಿದ್ದ ದಾವೀದನನ್ನು ಗೋಡೆಗೆ ಕಚ್ಚಿಕೊಳ್ಳುವಂತೆ ತಿವಿಯಬೇಕೆಂದು ಅವನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಫಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.


ರೆಕ್ಕೆಯುಳ್ಳ ಹಕ್ಕಿಯ ಕಣ್ಣೆದುರಿಗೇ ಬಲೆಯನ್ನು ಹರಡುವುದು ವ್ಯರ್ಥವಲ್ಲವೆ?


ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು.


ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು