Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:5 - ಕನ್ನಡ ಸತ್ಯವೇದವು C.L. Bible (BSI)

5 ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಂಡಿತ್ಯವನ್ನು ಹೊಂದುವನು, ವಿವೇಕಿಯು [ಮತ್ತಷ್ಟು] ಉಚಿತಾಲೋಚನೆಯುಳ್ಳವನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:5
18 ತಿಳಿವುಗಳ ಹೋಲಿಕೆ  

ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ಧೇನೆ. ನನ್ನ ಮಾತುಗಳನ್ನು ನೀವೇ ಪರಿಶೀಲಿಸಿನೋಡಿ.


ಬುದ್ದಿಯಿದ್ದರೆ ಇದನು ಕೇಳಿ ನನ್ನ ಮಾತಿನ ದನಿಗೆ ಕಿವಿಗೊಡಿ.


ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.


ಬುದ್ದಿವಂತರು, ನನ್ನನಾಲಿಸಿದ ಜ್ಞಾನಿಗಳು ನಿನ್ನ ವಿಷಯವಾಗಿ ಹೇಳುವ ಮಾತುಗಳಿವು:


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


“ಜ್ಞಾನಿಗಳೇ, ನನ್ನ ಮಾತನ್ನು ಗಮನಿಸಿ: ಮೇಧಾವಿಗಳೇ, ನನಗೆ ಕಿವಿಗೊಡಿ:


ಉಪದೇಶವನ್ನು ಕೇಳಿ ಬುದ್ಧಿವಂತರಾಗಿರಿ ಅದನ್ನು ನೀವು ನಿರಾಕರಿಸಬೇಡಿ.


ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು.


ಬುದ್ಧಿವಂತನ ಮನಸ್ಸು ತಿಳುವಳಿಕೆಯನ್ನು ಗಳಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.


ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.


ಕುಚೋದ್ಯನಿಗೆ ದಂಡನೆಯಾದರೆ ಮುಗ್ಧನಿಗೆ ಜ್ಞಾನಗಳಿಕೆ; ಜ್ಞಾನಿಗೆ ಶಿಕ್ಷೆಯಾದರೆ ತಾನೆ ಹೊಂದುವನು ತಿಳುವಳಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು