Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:9 - ಕನ್ನಡ ಸತ್ಯವೇದವು C.L. Bible (BSI)

9 ಅವು ನಿನ್ನ ತಲೆಗೆ ಸುಂದರ ಕಿರೀಟ, ನಿನ್ನ ಕೊರಳಿಗೆ ಕಂಠಾಭರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವು ನಿನ್ನ ತಲೆಗೆ ಅಂದದ ಪುಷ್ಪ ಕಿರೀಟ; ಕೊರಳಿಗೆ ಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನ್ನ ತಂದೆತಾಯಿಗಳ ಮಾತುಗಳು ನಿನ್ನ ತಲೆಗೆ ಸುಂದರವಾದ ಹೂವಿನ ಕಿರೀಟದಂತೆಯೂ ನಿನ್ನ ಕೊರಳಿಗೆ ಸುಂದರವಾದ ಹಾರದಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವು ನಿನ್ನ ತಲೆಗೆ ಸುಂದರ ಕಿರೀಟ ನಿನ್ನ ಕೊರಳನ್ನು ಅಲಂಕರಿಸುವ ಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:9
16 ತಿಳಿವುಗಳ ಹೋಲಿಕೆ  

ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.


ಅಂದದ ಪುಷ್ಪಮಾಲೆಯನ್ನು ಹಾಕುವಳು ನಿನ್ನ ಕೊರಳಿಗೆ, ಸುಂದರ ಕಿರೀಟವನ್ನು ಮುಡಿಸುವಳು ನಿನ್ನ ತಲೆಗೆ.”


ಅವು ನಿನ್ನಾತ್ಮಕ್ಕೆ ಜೀವಪ್ರದಾನವಾಗಿವೆ, ನಿನ್ನ ಕೊರಳಿಗೆ ಭೂಷಣವಾಗಿವೆ.


ತನ್ನ ಬೆರಳಿನಿಂದ ಮುದ್ರಿಕೆಯನ್ನು ತೆಗೆದು ಜೋಸೆಫನ ಬೆರಳಿಗೆ ಇಟ್ಟನು. ಅವನಿಗೆ ಮೌಲ್ಯವಾದ ವಸ್ತ್ರಗಳನ್ನು ಹೊದಿಸಿದನು. ಕೊರಳಿಗೆ ಚಿನ್ನದ ಸರವನ್ನು ಹಾಕಿಸಿದನು.


ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು,


ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,


ಎಷ್ಟು ಅಂದವಾಗಿವೆ ನಿನ್ನ ಕೆನ್ನೆಗಳು ಕಿವಿಯೋಲೆಗಳಿಂದ! ನಿನ್ನ ಕೊರಳು ಕಂಠಹಾರಗಳಿಂದ!


ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಹೃದಯವನ್ನು ನೀನು ಅಪಹರಿಸಿರುವೆ ಒಂದೇ ಕಿರುನೋಟದಿಂದ, ನನ್ನ ಹೃದಯವನ್ನು ವಶಪಡಿಸಿಕೊಂಡಿರುವೆ ನಿನ್ನ ಕಂಠಹಾರದ ಒಂದೇ ರತ್ನದಿಂದ.


ಈ ಕಾರಣ ಗರ್ವವೇ ಅವರಿಗೆ ಕಂಠಮಾಲೆ I ಹಿಂಸಾಚಾರವೇ ಅವರಿಗೆ ಬಟ್ಟೆಬರೆ II


ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.


ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು