Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:14 - ಕನ್ನಡ ಸತ್ಯವೇದವು C.L. Bible (BSI)

14 ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವದಿಲ್ಲ, ಮೂರ್ಖನ ಭಾಷಣ ಸಮೀಪನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜ್ಞಾನಿಗಳು ಮೌನವಾಗಿದ್ದು ಹೊಸ ಸಂಗತಿಗಳನ್ನು ಕಲಿತುಕೊಳ್ಳುತ್ತಾರೆ. ಮೂಢರಾದರೋ ಮಾತಾಡಿ ತಮಗೇ ತೊಂದರೆಯನ್ನು ತಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:14
17 ತಿಳಿವುಗಳ ಹೋಲಿಕೆ  

ಬುದ್ಧಿಹೀನನಿಗೆ ಬಾಯೇ ನಾಶ, ತುಟಿಗಳೇ ಅವನಿಗೆ ಪಾಶ.


ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.


ಬಾಯಿಯನ್ನು ಕಾಯುವವನು ಜೀವವನ್ನು ಕಾಯುವನು; ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.


ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.


ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.


ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ಬಾಯನ್ನೂ ನಾಲಿಗೆಯನ್ನೂ ಕಾಯಬಲ್ಲವನು ಜಯಿಸುವನು ತೊಂದರೆ ತಾಪತ್ರಯಗಳನ್ನು.


ಬುದ್ಧಿಯನ್ನು ಗಳಿಸುವವನು ತನಗೆ ತಾನೇ ಗೆಳೆಯನು; ವಿವೇಕವನ್ನು ಕಾಪಾಡುವವನು ಪಡೆಯುವನು ಏಳಿಗೆಯನ್ನು.


ಬುದ್ಧಿವಂತನ ಮನಸ್ಸು ತಿಳುವಳಿಕೆಯನ್ನು ಗಳಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.


ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.


ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.


ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು