Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:29 - ಕನ್ನಡ ಸತ್ಯವೇದವು C.L. Bible (BSI)

29 ಸನ್ಮಾರ್ಗಿಗೆ ಸರ್ವೇಶ್ವರನೆ ಆಶ್ರಯ; ಕೆಡುಕನಿಗೆ ಆತನೆ ಪ್ರಳಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನು ಒಳ್ಳೆಯವರನ್ನು ಕೋಟೆಯಂತೆ ಕಾಪಾಡುತ್ತಾನೆ, ಕೆಡುಕರನ್ನಾದರೋ ನಾಶಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:29
16 ತಿಳಿವುಗಳ ಹೋಲಿಕೆ  

ನ್ಯಾಯವಾದ ತೀರ್ಪಿನಿಂದ ಸಜ್ಜನರಿಗೆ ಸಂತಸ; ದುರ್ಜನರಿಗಾದರೊ ಅದು ತರುತ್ತದೆ ಸಂಕಟ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II


ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II


ಕೇಡು ಮಾಡಿದವರಿದೋ ಕೆಳಗೆ ಬಿದ್ದಿಹರು I ಮರಳಿ ಏಳಲಾಗದೆ ಮಡಿದು ಬಿದ್ದಿಹರು II


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?


ನೀತಿ ಕಾಪಾಡುವುದು ನಿರ್ದೋಷಿಯನ್ನು; ಅನೀತಿ ಕೆಡವಿಬಿಡುವುದು ಪಾಪಿಯನ್ನು.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ದುರುಳನೊಂದಿಗೆ ಸಾಯುವುದು ಅವನ ನಿರೀಕ್ಷೆ; ಅಳಿವುದು ಸಾಮರ್ಥ್ಯದ ಮೇಲಿಟ್ಟ ಅವನ ನಂಬಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು