Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:10 - ಕನ್ನಡ ಸತ್ಯವೇದವು C.L. Bible (BSI)

10 ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:10
23 ತಿಳಿವುಗಳ ಹೋಲಿಕೆ  

ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ?


ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.


ತಮ್ಮಲ್ಲಿ ಅತಿ ಶ್ರೇಷ್ಠನು ಯಾರು ಎಂಬ ವಾದವಿವಾದವು ಶಿಷ್ಯರಲ್ಲಿ ಎದ್ದಿತು.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.


ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.


ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ನೋಡಿ ಇಸ್ರಯೇಲರೆಲ್ಲರೂ ಅವನಿಗೆ, “ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ; ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ; ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನವರು ತಮ್ಮ ಕುಲವನ್ನು ತಾವೇ ನೋಡಿಕೊಳ್ಳಲಿ!” ಎಂದು ಹೇಳಿ ತಮ್ಮ ಮನೆಗಳಿಗೆ ಹೊರಟುಹೋದರು.


ಅವುಗಳನ್ನು ಕಂಡವರೆಲ್ಲರು, “ಇಸ್ರಯೇಲರು ಈಜಿಪ್ಟನ್ನು ಬಿಟ್ಟು ಬಂದ ದಿವಸ ಮೊದಲ್ಗೊಂಡು ಈ ದಿವಸದವರೆಗೆ ಇಂಥ ಕೃತ್ಯ ನಡೆಯಲೂ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಗಂಭೀರವಾಗಿ ವಿಚಾರಿಸತಕ್ಕದ್ದು,” ಎಂದುಕೊಂಡರು.


ಸಜ್ಜನರ ಬೆಳಕು ಪ್ರಜ್ವಲಿಸುವುದು; ದುರ್ಜನರ ದೀಪವು ಆರಿಹೋಗುವುದು.


ಬಿಟ್ಟಿಯಾಗಿ ಸಿಕ್ಕಿದ ಸಂಪತ್ತು ಬೇಗನೆ ಕರಗುವುದು; ದುಡಿದು ಕೂಡಿಸಿದ ಹಣ ಅಭಿವೃದ್ಧಿಯಾಗುವುದು.


ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು