Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:12 - ಕನ್ನಡ ಸತ್ಯವೇದವು C.L. Bible (BSI)

12 ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವದು; ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:12
20 ತಿಳಿವುಗಳ ಹೋಲಿಕೆ  

ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ; ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ಯಕೋಬನು ಜೋಸೆಫನಿಗೆ, “ಇನ್ನು ನಾನು ಸಂತೃಪ್ತಿಯಾಗಿ ಸಾಯುವೆನು. ನೀನು ಇನ್ನೂ ಬದುಕಿರುವೆಯೆಂದು ಕೇಳಿದ್ದಾಯಿತು; ನಿನ್ನ ಮುಖವನ್ನು ಕಣ್ಣಾರೆ ನೋಡಿದ್ದಾಯಿತು,” ಎಂದನು.


ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ : “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು :


ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಬಿಟ್ಟಿಯಾಗಿ ಸಿಕ್ಕಿದ ಸಂಪತ್ತು ಬೇಗನೆ ಕರಗುವುದು; ದುಡಿದು ಕೂಡಿಸಿದ ಹಣ ಅಭಿವೃದ್ಧಿಯಾಗುವುದು.


ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.


ರಾಜ ನನಗೆ, “ನೀನು ಕಳೆಗುಂದಿದವನಾಗಿರುವೆ, ಏಕೆ? ನಿನ್ನ ದೇಹಾರೋಗ್ಯ ಚೆನ್ನಾಗಿದೆಯಲ್ಲವೆ? ಇದಕ್ಕೆ ಮನೋವೇದನೆಯೇ ಹೊರತು ಬೇರೇನೂ ಕಾರಣ ಇರಲಾರದು,” ಎಂದು ಹೇಳಿದ. ನನಗೆ ಮಹಾಭೀತಿಯುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು