Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:31 - ಕನ್ನಡ ಸತ್ಯವೇದವು C.L. Bible (BSI)

31 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು; ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:31
19 ತಿಳಿವುಗಳ ಹೋಲಿಕೆ  

ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರು; ಅವರೆಲ್ಲರನ್ನು ಸೃಷ್ಟಿಸಿದಾತ ಸರ್ವೇಶ್ವರನು.


ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.


ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಬಡಬಗ್ಗರು ನಿಮ್ಮ ಬಳಿಯಲ್ಲಿ ಯಾವಾಗಲೂ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿ ಇರುವುದಿಲ್ಲ,” ಎಂದರು.


ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.


ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರನು.


“ಸ್ವದೇಶದವರಲ್ಲೇ ಆಗಲಿ, ನಿಮ್ಮಲ್ಲಿ ಇರುವ ಅನ್ಯದೇಶದವರಲ್ಲೇ ಆಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ ನೀವು ಏನೂ ಅನ್ಯಾಯ ಮಾಡಬಾರದು;


ದಿಕ್ಕಿಲ್ಲದವರನು ದಾರಿತಪ್ಪಿಸುತ್ತಾರೆ ನಾಡಿನ ಬಡವರನು ಅಡಗಿಸಿಬಿಡುತ್ತಾರೆ.


ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.


“ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ನೀವು ಅವನನ್ನು ನಿಮ್ಮ ನಡುವೆ ತಂಗಿರುವ ಆಗಂತುಕನೆಂದು ಭಾವಿಸಿ ಸಹಾಯಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು