Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:6 - ಕನ್ನಡ ಸತ್ಯವೇದವು C.L. Bible (BSI)

6 ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಧರ್ಮನಿಂದಕನಿಗೆ ಹುಡುಕಿದರೂ ಜ್ಞಾನವು ಸಿಕ್ಕದು; ವಿವೇಕಿಗೆ ತಿಳುವಳಿಕೆಯು ಸುಲಭವಾಗಿ ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:6
24 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.


ತಿಳುವಳಿಕೆ ಉಳ್ಳವನಿಗೆ ಅವೆಲ್ಲ ಸರಳ ಗ್ರಹಿಕೆ ಉಳ್ಳವನಿಗೆ ಅವು ಯಥಾರ್ಥ.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.


ವಿವೇಕಿಗೆ ಜ್ಞಾನವೇ ಗುರಿ ಧ್ಯೇಯ; ಮೂಢನ ದೃಷ್ಟಿ ದಿಗಂತದಷ್ಟು ವಿಶಾಲ.


ನಿನ್ನ ಶಾಸ್ತ್ರದ ಮಹಿಮೆಯನು ಅರಿಯುವಂತೆ I ನನ್ನ ಕಣ್ಗಳಿಂದ ನೀ ತೆಗೆದುಬಿಡು ಅಂಧತೆ II


ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.


ಸತ್ಯಸಾಕ್ಷಿ ಸುಳ್ಳಾಡದ ವ್ಯಕ್ತಿ; ಸುಳ್ಳು ಸಾಕ್ಷಿ ಅಬದ್ಧಪ್ರಿಯ ವ್ಯಕ್ತಿ.


ಮೂರ್ಖನಿಂದ ದೂರವಿರು; ಜ್ಞಾನವಚನ ಅವನಲ್ಲಿ ಕಾಣಸಿಗದು.


ಜ್ಞಾನವು ಮೂರ್ಖನಿಗೆ ಎಟುಕದಷ್ಟು ಎತ್ತರ; ನ್ಯಾಯಸ್ಥಾನದಲ್ಲಿ ಅವನು ಬಾಯಿಬಿಡಲಾರ.


ನನ್ನ ಮಾತುಗಳೆಲ್ಲ ನೀತಿಭರಿತ ಅವುಗಳಲ್ಲಿ ಇಲ್ಲ ಕುಟಿಲ, ಕುತಂತ್ರ.


ಕುಚೋದ್ಯನಿಗೆ ಬೇಡ ಬುದ್ಧಿವಾದ; ಅವನಿಗೆ ಬೇಡ ಜ್ಞಾನಿಗಳ ಸತ್ಸಂಘ.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು