Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:21 - ಕನ್ನಡ ಸತ್ಯವೇದವು C.L. Bible (BSI)

21 ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವದು; ಸವಿತುಟಿಯಿಂದ ಉಪದೇಶಶಕ್ತಿಯು ಹೆಚ್ಚುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಜ್ಞಾನಿಯನ್ನು ಅವನ ಜ್ಞಾನದಿಂದಲೇ ಜನರು ಗುರುತಿಸುವರು. ಎಚ್ಚರಿಕೆಯಿಂದ ಮಾತಾಡುವವನು ಒಡಂಬಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:21
18 ತಿಳಿವುಗಳ ಹೋಲಿಕೆ  

ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಹಿತಕರವಾದ ವಚನಗಳನ್ನು ಅವನು ಹುಡುಕಿ ಆರಿಸಿದ; ಅವನಿಂದ ರಚಿತವಾದವು ಸರಿಯಾದುವು, ಸತ್ಯವಾದುವು.


ಮಗನೇ, ನೀನು ಬುದ್ಧಿವಂತನಾದರೆ ಆನಂದವೇ ಆನಂದ ನನ್ನ ಮನಸ್ಸಿಗೆ.


ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.


ಮೂರ್ಖನಿಗೆ ಕೆಡುಕುಮಾಡುವ ಚಟ; ಬುದ್ಧಿವಂತನಿಗೆ ಜ್ಞಾನಗಳಿಸುವ ಹಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು