Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:18 - ಕನ್ನಡ ಸತ್ಯವೇದವು C.L. Bible (BSI)

18 ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಲಿಷ್ಠರಾದ ಇಬ್ಬರು ವಾದಮಾಡುತ್ತಿರುವಾಗ ನಿರ್ಧಾರಕ್ಕಾಗಿ ಚೀಟುಹಾಕಿದರೆ ಅವರ ಜಗಳ ಶಮನವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:18
10 ತಿಳಿವುಗಳ ಹೋಲಿಕೆ  

ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.


ಇಸ್ರಯೇಲರ ಪ್ರಮುಖರು ಮಾತ್ರ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತುಹತ್ತು ಮಂದಿಯಲ್ಲಿ ಒಂಬತ್ತುಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಒಬ್ಬನು ಪವಿತ್ರ ನಗರವಾದ ಜೆರುಸಲೇಮಿನಲ್ಲಿ ವಾಸಿಸುವುದಕ್ಕಾಗಿ, ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತುಮಾಡಿದರು.


ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ, ತಮ್ಮ ಕುಲಬಂಧುಗಳಾದ ಆರೋನ್ಯರಂತೆ, ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆ ಹಾಗೂ ಯಾಜಕರ ಮತ್ತು ಲೇವಿಯರ ಕುಟುಂಬ ಮುಖ್ಯಸ್ಥರ ಮುಂದೆ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ಇದೇ ರೀತಿಯಲ್ಲಿ ರೂಬೇನ್, ಗಾದ್, ಜೆಬುಲೂನರ ಪ್ರದೇಶಗಳಲ್ಲಿದ್ದ ಹನ್ನೆರಡು ಪಟ್ಟಣಗಳನ್ನು ಕುಟುಂಬಗಳಿಗನುಸಾರವಾಗಿ ಮೆರಾರಿಯ ಗೋತ್ರಕ್ಕೆ ಮಂಜೂರು ಮಾಡಲಾಯಿತು.


ಸೌಲನು ಮತ್ತೆ, “ನಮ್ಮಿಬ್ಬರೊಳಗೆ ಚೀಟುಹಾಕಿ,” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು.


ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.


ಮೊದಲು ವಾದಿಸುವವನು ನ್ಯಾಯವಾದಿಯೆಂದೇ ತೋರುವನು; ಅವನ ಬಂಡವಾಳ ಗೊತ್ತಾಗುವುದು ಪ್ರತಿವಾದಿ ಎದ್ದ ಮೇಲೆ.


ಸಹಾಯ ಹೊಂದಿದ ಸೋದರ ದುರ್ಗಕ್ಕಿಂತಲು ದುಸ್ತರ; ಅವನೊಡನೆ ಜಗಳ ಕೋಟೆ ಮನೆಗೆ ಹಾಕಿದ ಅಗುಳಿ.


ಅನಂತರ ಸೌಲನು, “ಇಸ್ರಯೇಲ್ ದೇವರೇ, ಸತ್ಯವನ್ನು ತಿಳಿಸಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿ ಚೀಟುಹಾಕಿದನು. ಅದು ಅವನಿಗೂ ಯೋನಾತಾನನಿಗೂ ಬಂದಿತು. ಜನರು ಪಾರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು