Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:2 - ಕನ್ನಡ ಸತ್ಯವೇದವು C.L. Bible (BSI)

2 ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವದೇ ಅವನಿಗಿಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೂಢನಿಗೆ ಅರ್ಥಮಾಡಿಕೊಳ್ಳಲು ಇಷ್ಟವಿಲ್ಲ. ಅವನು ತನ್ನ ಆಲೋಚನೆಗಳನ್ನೇ ಹೇಳಬಯಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:2
14 ತಿಳಿವುಗಳ ಹೋಲಿಕೆ  

ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!


ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಮೂಢನು ಮೂರ್ಖತನವನ್ನು ತೋರ್ಪಡಿಸುತ್ತಾನೆ.


ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.


ಬುದ್ಧಿತಪ್ಪಿ ತಿರುಗಾಡುವ ಹುಚ್ಚನು ದಾರಿಯಲ್ಲೆಲ್ಲಾ ತನ್ನ ಹುಚ್ಚುತನವನ್ನು ಪ್ರಕಟಮಾಡುತ್ತಾನೆ.


ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ;


ಆದ್ದರಿಂದ ಪವಿತ್ರಾತ್ಮ ವರಗಳ ಮೇಲೆ ಆಸಕ್ತಿಯುಳ್ಳ ನೀವು, ಧರ್ಮಸಭೆಯನ್ನು ಅಭಿವೃದ್ಧಿಗೊಳಿಸಬಲ್ಲ ವರಗಳ ಮೇಲೆ ಆಸಕ್ತರಾಗಿರಿ.


ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡಿತು.


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ದುರಾಚಾರವಿದ್ದಲ್ಲಿ ತಾತ್ಸಾರ; ಮಾನ ಕಳೆದುಕೊಂಡಲ್ಲಿ ಧಿಕ್ಕಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು