Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 18:23 - ಕನ್ನಡ ಸತ್ಯವೇದವು C.L. Bible (BSI)

23 ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಡವನು ಬಿನ್ನೈಸುವನು; ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಡವನು ವಿನಯದಿಂದ ಬೇಡಿಕೊಳ್ಳುವನು; ಐಶ್ವರ್ಯವಂತನು ಬಿರುಸಾಗಿ ಉತ್ತರಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 18:23
18 ತಿಳಿವುಗಳ ಹೋಲಿಕೆ  

ಆಗ, ನೀವು ಸೊಗಸಾದ ಉಡುಪನ್ನು ಧರಿಸಿದವನಿಗೆ ಗೌರವದಿಂದ, “ಬನ್ನಿ ಸ್ವಾಮೀ ಬನ್ನಿ, ದಯವಿಟ್ಟು ಈ ಪೀಠವನ್ನು ಅಲಂಕರಿಸಿ,” ಎನ್ನುತ್ತೀರಿ. ಬಡವನಿಗೆ, “ನೀನು ಅಲ್ಲಿಯೇ ನಿಂತುಕೋ, ಇಲ್ಲವೇ ಕೆಳಗೆ, ನನ್ನ ಕಾಲ ಬಳಿ ಕುಳಿತುಕೋ,” ಎನ್ನಿತ್ತೀರಿ. ಹೀಗಿರಲು,


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.


ನಿನ್ನ ಮನೆಯಲ್ಲಿ ಅಳಿದು ಉಳಿದವರು ಬಂದು ಅವನ ಮುಂದೆ ಅಡ್ಡಬೀಳುವರು; ‘ನಮಗೊಂದು ಬೆಳ್ಳಿಕಾಸನ್ನಾದರೂ ರೊಟ್ಟಿ ಚೂರನ್ನಾದರೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವುದಕ್ಕಾದರು ನಮ್ಮನ್ನು ಸೇರಿಸಿಕೋ’ ಎಂದು ಬೇಡಿಕೊಳ್ಳುವರು".


ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ಮಧ್ಯೆ ಹಕ್ಕಲಾಯ್ದುಕೊಳ್ಳುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲೇ ಇದ್ದಾಳೆ. ಸದ್ಯಕ್ಕೆ ನೆರಳಿನಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


“ಆ ದೇಶಾಧಿಪತಿ ನಮ್ಮೊಡನೆ ಗಡುಸಾಗಿ ಮಾತಾಡಿದ; ನಮ್ಮನ್ನು ಗೂಢಚಾರರೆಂದು ಕರೆದ.


ಜೋಸೆಫನು ಅವರನ್ನು ನೋಡಿದಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುಬುಡಿಯಿಂದ, “ನೀವು ಎಲ್ಲಿಯವರು?” ಎಂದು ಕೇಳಿದನು. ಅವರು, “ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು,” ಎಂದು ಹೇಳಿದರು.


ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ, ಯೌವನಸ್ಥರ ಆಲೋಚನೆಗನುಸಾರ ಜನರಿಗೆ,


ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.


ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.


ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ಅದು ನಿನ್ನ ಸಂಗಡ ಸವಿಮಾತಾಡೀತೆ? ನಿನಗೆ ವಿನಮ್ರ ವಿಜ್ಞಾಪನೆ ಮಾಡೀತೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು