Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:16 - ಕನ್ನಡ ಸತ್ಯವೇದವು C.L. Bible (BSI)

16 ದೈವಾಜ್ಞೆಯನ್ನು ಪಾಲಿಸುವವನು ತನ್ನನ್ನೇ ಕಾಪಾಡಿಕೊಳ್ಳುವನು; ದೈವವಾರ್ತೆಯ ಬಗ್ಗೆ ಅಜಾಗ್ರತನಾಗಿರುವವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಜ್ಞೆಗಳಿಗೆ ವಿಧೇಯನಾಗುವವನು ತನ್ನ ಪ್ರಾಣವನ್ನು ಸಂರಕ್ಷಿಸಿಕೊಳ್ಳುವನು. ಆದರೆ ತನ್ನ ನಡತೆಯ ಬಗ್ಗೆ ನಿರ್ಲಕ್ಷ್ಯದಿಂದಿರುವವನು ಸಾವಿಗೀಡಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:16
25 ತಿಳಿವುಗಳ ಹೋಲಿಕೆ  

ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು.


ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.


ಬಾಯನ್ನೂ ನಾಲಿಗೆಯನ್ನೂ ಕಾಯಬಲ್ಲವನು ಜಯಿಸುವನು ತೊಂದರೆ ತಾಪತ್ರಯಗಳನ್ನು.


ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ರಾಜಾಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸದು. ಅದನ್ನು ಯಾವಾಗ, ಹೇಗೆ ಪಾಲಿಸಬೇಕೆಂದು ಜ್ಞಾನಿಗೆ ಮನದಟ್ಟಾಗಿರುತ್ತದೆ.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.


ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ವಕ್ರಬುದ್ಧಿಯುಳ್ಳವನ ಹಾದಿತುಂಬ ಮುಳ್ಳು, ಉರುಳು; ಅದರಿಂದ ದೂರವಿರುವನು ಪ್ರಾಣದಾಸೆಯುಳ್ಳವನು.


ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.


ಅಂತೆಯೇ ಆತನ ನಿಬಂಧನೆಗಳನು ಕೈಗೊಳ್ಳುವವರಿಗೆ I ಆತನ ವಿಧಿನಿಯಮಗಳು ನೆನಪಿನಲ್ಲಿಟ್ಟು ನಡೆವವರಿಗೆ II


ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.


ಬುದ್ಧಿಮಾರ್ಗ ಬಿಟ್ಟು ನಡೆದವನು ಪ್ರೇತಗಳ ನಡುವೆ ವಿಶ್ರಾಂತಿ ಪಡೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು