Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:17 - ಕನ್ನಡ ಸತ್ಯವೇದವು C.L. Bible (BSI)

17 ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:17
21 ತಿಳಿವುಗಳ ಹೋಲಿಕೆ  

ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.


ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.


ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.


ಮಾತುಬಲ್ಲವನು ಬದುಕುವನು ಸಂತುಷ್ಟನಾಗಿ; ಕೈಯಿರುವವನು ಬಾಳುವನು ಬಹು ಮಾನಿತನಾಗಿ.


ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು,” ಎಂದನು.


“ನೀವು ಬೆಳೆಯನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರಲು ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ; ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲಿ ಕೈಗೂಡಿಸಿ ನಿಮ್ಮನ್ನು ಅಭಿವೃದ್ಧಿಪಡಿಸುವರು.


ದೀನದರಿದ್ರರಿಗೆ ದಯೆಯ ತೋರುವನು I ದಲಿತರ ಪ್ರಾಣವನು ಕಾಪಾಡುವನು II


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.


ಅಂಥವನನು ಪ್ರಭು ಜೀವದಿಂದಿರಿಸುವನು, ಸುರಕ್ಷಿತವಾಗಿಡುವನು I ನಾಡಿನಲ್ಲವನನು ಧನ್ಯನಾಗಿಸುವನು, ಶತ್ರುಗಳಿಗಧೀನನಾಗಿಸನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು