Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:22 - ಕನ್ನಡ ಸತ್ಯವೇದವು C.L. Bible (BSI)

22 ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಷ್ಟವು ಔದಾರ್ಯದ ಪ್ರಮಾಣ; [ಇದ್ದರೂ ಇಲ್ಲವೆಂದು] ಸುಳ್ಳಾಡುವವನಿಗಿಂತಲೂ ಏನೂ ಇಲ್ಲದವನೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:22
14 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಯಾವನು ಸ್ವಾರ್ಥಕ್ಕಾಗಿ ಮಿತ್ರನ ಮೇಲೆ ಹೊರಿಸುತ್ತಾನೋ ದೂರು ಅಂಥವನ ಮಕ್ಕಳ ಕಣ್ಣುಗಳು ಮಂಕಾಗಿಹೋಗದಿರವು.


ಹರಿದು ಓಡುವ ತೊರೆಯಂತೆ ಉಕ್ಕಿ ಹರಿಯುವ ಪ್ರವಾಹದಂತೆ ದ್ರೋಹವೆಸಗಿದ್ದಾರೆ ಸೋದರರು ನನಗೆ.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು