Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:13 - ಕನ್ನಡ ಸತ್ಯವೇದವು C.L. Bible (BSI)

13 ನಿದ್ದೆಯಲ್ಲೆ ನಿರತನಾಗಿರಬೇಡ, ಬಡವನಾಗಿ ಬಿಡುವೆ. ಕಣ್ಣು ತೆರೆದು ದುಡಿ, ಹೊಟ್ಟೆತುಂಬ ಊಟ ಪಡೆವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿದ್ರಾನಿರತನಾಗಿರಬೇಡ! ಬಡವನಾದೀಯೆ; ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿದ್ರಾನಿರತನಾಗಿರಬೇಡ, ಬಡವನಾಗುವೆ. ನಿನ್ನ ಸಮಯವನ್ನು ದುಡಿಯಲು ಉಪಯೋಗಿಸಿಕೊಂಡರೆ ನಿನಗೆ ಊಟಕ್ಕೆ ಬೇಕಾದಷ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:13
15 ತಿಳಿವುಗಳ ಹೋಲಿಕೆ  

ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.


ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.


ಉತ್ತು ವ್ಯವಸಾಯ ಮಾಡುವವನು ಹೊಟ್ಟೆತುಂಬ ಉಣ್ಣುವನು; ವ್ಯರ್ಥಕಾರ್ಯಗಳಲ್ಲಿ ಆಸಕ್ತಿಯುಳ್ಳವನು ಮತಿಹೀನನು.


ಜೋಲುಗೈ ತರುತ್ತದೆ ದಾರಿದ್ರ್ಯ; ಚುರುಕು ಕೈ ತರುತ್ತದೆ ಐಶ್ವರ್ಯ.


ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.


ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಕೊಳ್ಳುವಾಗ ‘ಅದು ಚೆನ್ನಾಗಿಲ್ಲ, ಇದು ಚೆನ್ನಾಗಿಲ್ಲ’ ಅನ್ನುತ್ತಾನೆ; ಕೊಂಡಾದ ಮೇಲೆ ಮಾಡಿದ ಚೌಕಾಶಿಗಾಗಿ ಹೆಚ್ಚಳ ಪಡುತ್ತಾನೆ.


ದುಡಿದು ಹೊಲ ಗೇಯುವವನಿಗೆ ಹೊಟ್ಟೆ ತುಂಬ ಅನ್ನ; ವ್ಯರ್ಥಕಾರ್ಯಗಳಲ್ಲಿ ಆಸಕ್ತನಾದವನಿಗೆ ಬೇಕಾದಷ್ಟು ಬಡತನ.


ಇನ್ನೂ ಕತ್ತಲಿರುವಾಗಲೆ ಎದ್ದುಬಿಡುತ್ತಾಳೆ, ಮನೆಯವರಿಗೆ ತಿಂಡಿತೀರ್ಥ ಅಣಿಮಾಡುತ್ತಾಳೆ, ಕೆಲಸಗಿತ್ತಿಯರಿಗೆ ದಿನಗೆಲಸಗಳನ್ನು ನೇಮಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು