Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:18 - ಕನ್ನಡ ಸತ್ಯವೇದವು C.L. Bible (BSI)

18 ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು; ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಲಹೆಯಿಂದ ಯೋಜನೆಗಳು ನೆರವೆರುವವು; ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:18
16 ತಿಳಿವುಗಳ ಹೋಲಿಕೆ  

ಬುದ್ಧಿವಂತನು ನಾಯಕನನ್ನಿಟ್ಟು ಯುದ್ಧ ನಡೆಸುವನು; ಸುಮಂತ್ರಿಗಳು ಹಲವರಿದ್ದರೆ ಸಂರಕ್ಷಣೆಯಿರುವುದು.


ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ?


ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.


ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ಇಲ್ಲಿ ಕೂಡಿರುವ ಎಲ್ಲ ಇಸ್ರಯೇಲರೇ, ಈಗ ನಿಮ್ಮ ಆಲೋಚನೆಗಳನ್ನೂ ಅಭಿಪ್ರಾಯಗಳನ್ನೂ ಹೇಳಿ,” ಎಂದನು.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.


ಈ ಜನರ ಮೇಲೆ ನನಗೆ ಅಧಿಕಾರವಿದ್ದರೆ ಅಬೀಮೆಲೆಕನನ್ನು ಓಡಿಸಿ ಬಿಡುತ್ತಿದ್ದೆ,” ಎಂದು ಹೇಳಿದನು. ಅಷ್ಟು ಮಾತ್ರವಲ್ಲದೆ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ,” ಎಂದು ಕೊಚ್ಚಿಕೊಂಡನು.


(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.


ಅವುಗಳನ್ನು ಕಂಡವರೆಲ್ಲರು, “ಇಸ್ರಯೇಲರು ಈಜಿಪ್ಟನ್ನು ಬಿಟ್ಟು ಬಂದ ದಿವಸ ಮೊದಲ್ಗೊಂಡು ಈ ದಿವಸದವರೆಗೆ ಇಂಥ ಕೃತ್ಯ ನಡೆಯಲೂ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಗಂಭೀರವಾಗಿ ವಿಚಾರಿಸತಕ್ಕದ್ದು,” ಎಂದುಕೊಂಡರು.


ಈಗ ನಿನ್ನ ಮತ್ತು ನಿನ್ನ ಮಗ ಸೊಲೊಮೋನನ ಜೀವವನ್ನು ಉಳಿಸಿಕೊಳ್ಳಬೇಕಾದರೆ ನನ್ನ ಆಲೋಚನೆಯನ್ನು ಕೇಳು;


ಬರಿ ಬಾಯಿಮಾತೊಂದರಿಂದ ಯುದ್ಧಕ್ಕೆ ಬೇಕಾದ ವಿವೇಕ ಹಾಗು ಶಕ್ತಿ ಉಂಟೆಂದು ಅರಿತುಕೊಂಡಿರುವೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು