Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:7 - ಕನ್ನಡ ಸತ್ಯವೇದವು C.L. Bible (BSI)

7 ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು; ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಧರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:7
18 ತಿಳಿವುಗಳ ಹೋಲಿಕೆ  

ಬಲಿಷ್ಠವಾಗುವುದು ಜಗದೊಳು ಅವನ ಸಂತಾನ I ಸಜ್ಜನರ ಸಂತತಿ ಪಡೆವುದು ಆಶೀರ್ವಚನ II


ದಾನ ನೀಡುವನು, ಸಾಲ ನಿರಾಕರಿಸನು ಸಜ್ಜನನು I ಆತನ ಸಂತಾನ ಹೊಂದುವುದು ಆಶೀರ್ವಾದವನು II


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ.


ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು