Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:1 - ಕನ್ನಡ ಸತ್ಯವೇದವು C.L. Bible (BSI)

1 ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:1
26 ತಿಳಿವುಗಳ ಹೋಲಿಕೆ  

ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.


ಮಾನವನ ಸ್ಥಿತಿಗತಿ ಸರ್ವೇಶ್ವರನ ಏರ್ಪಾಡು; ಮನುಷ್ಯ ತನ್ನ ಮಾರ್ಗವನ್ನು ತಾನೇ ಹೇಗೆ ತಿಳಿದಾನು?


ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.


ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.


ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II


ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ,


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಒರತೆ ಊಟೆಗಳ ಉಕ್ಕಿಸಿದಾತ ನೀನು I ಹರಿವ ನದಿಗಳ ಬತ್ತಿಸಿಬಿಟ್ಟವ ನೀನು II


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ಸಾಗರಗಳ ಗರ್ಜನೆಗಿಂತ I ಸಮುದ್ರ ತರಂಗಗಳಿಗಿಂತ I ಮಹೋನ್ನತ ಪ್ರಭು ಬಲವಂತ II


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಸುರಿದನು. ನೀರೆಲ್ಲಾ ರಕ್ತಮಯವಾಯಿತು.


ಕಡಲೇ, ಓಡುತ್ತಿರುವೆ ಏಕೆ? I ಜೋರ್ಡನ್, ಮರಳುತಿರುವೆ ಏಕೆ? II


ಇದ ಕಂಡು ಓಡಿಹೋಯಿತು ಕಡಲು I ಮರಳಿ ಬಂದಿತು ಜೋರ್ಡಾನ್ ಹೊನಲು II


“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.


ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.


ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಕಾಲಿಡನು.


ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.


ಅರಸನು, ಎಲ್ಲಾ ಸ್ತ್ರೀಯರಿಗಿಂತಲೂ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಎಲ್ಲಾ ಕನ್ಯೆಯರ ಪೈಕಿ ಅರಸನ ವಿಶೇಷ ದಯೆಗೂ ಪ್ರೀತಿಗೂ ಪಾತ್ರಳಾದಳು. ಈ ಕಾರಣ, ಅರಸನು ಆಕೆಯ ತಲೆಯ ಮೇಲೆ ರಾಜಮುಕುಟವನ್ನಿಟ್ಟು ವಷ್ಟಿರಾಣಿಗೆ ಬದಲಾಗಿ ಆಕೆಯನ್ನು ತನ್ನ ಪಟ್ಟದರಸಿಯನ್ನಾಗಿ ಆರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು