Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:31 - ಕನ್ನಡ ಸತ್ಯವೇದವು C.L. Bible (BSI)

31 ಯುದ್ಧಕ್ಕಾಗಿ ಸನ್ನದ್ಧವಾಗಿರಬಹುದು ಅಶ್ವಬಲ; ಜಯಸಿಗುವುದಾದರೋ ಸರ್ವೇಶ್ವರನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯುದ್ಧಕ್ಕಾಗಿ ಕುದುರೆಗಳನ್ನು ಸಿದ್ಧಪಡಿಸುತ್ತಾರೆ; ಆದರೆ ಜಯದ ನಿರ್ಧಾರ ಯೆಹೋವನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:31
13 ತಿಳಿವುಗಳ ಹೋಲಿಕೆ  

ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಅಶ್ವಬಲದಲಿ ಆತನಿಗೆ ಇಷ್ಟವಿಲ್ಲ I ಶೂರನ ಶಕ್ತಿಯನವನು ಮೆಚ್ಚುವುದಿಲ್ಲ II


ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.


ಆದರೆ ನಮ್ಮ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ನಮಗೆ ಜಯವನ್ನು ದೊರಕಿಸಿಕೊಟ್ಟಿರುವ ದೇವರಿಗೆ ಸ್ತೋತ್ರ ಸಲ್ಲಲಿ!


ಇಸ್ರಯೇಲರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಸರ್ವೇಶ್ವರ ಮಹಾಜಯವನ್ನುಂಟುಮಾಡಿದರು.


ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು