Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:29 - ಕನ್ನಡ ಸತ್ಯವೇದವು C.L. Bible (BSI)

29 ಕಿರಿಚಾಟ, ಕೂಗಾಟ, ಕಿತ್ತಾಟ, ಗೋಳಾಟವು ನಿರ್ನಿಮಿತ್ತ ಹುಣ್ಣು, ಕೆಂಪೇರಿದ ಕಣ್ಣು; ಇವುಗಳನ್ನು ಅನುಭವಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯಾರಿಗೆ ಕಷ್ಟ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೊಣಗುಟ್ಟುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಯಾರಿಗೆ ಕೆಂಪೇರಿದ ಕಣ್ಣುಗಳು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:29
16 ತಿಳಿವುಗಳ ಹೋಲಿಕೆ  

ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ !


ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ !


ಕುಡುಕನಿಗೂ ಹೊಟ್ಟೆಬಾಕನಿಗೂ ಕಾದಿದೆ ದುರ್ಗತಿ; ಹರಕು ಬಟ್ಟೆಗಳನ್ನು ಹೊದಿಸುವುದು ಅವರ ನಿದ್ರಾಸಕ್ತಿ.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.


ಅವನ ಕಣ್ಣು ಕೆಂಪಾಗಿರುವುವು ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಹಲ್ಲು ಬೆಳ್ಳಗಿರುವುವು ಹಾಲಿನ ಸಮೃದ್ಧಿಯಿಂದ.


ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.


ಕುಡುಕರೊಡನೆ, ಹೊಟ್ಟೆಬಾಕರೊಡನೆ ಸೇರಬೇಡ; ಮಿತಿಮೀರಿ ಮಾಂಸ ತಿನ್ನುವ ಜನರ ಜೊತೆ ನಿನಗೆ ಬೇಡ.


ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಹಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು. ಅವಳು ಯಾವಾಗ ತನ್ನ ಸಂಗಡ ಮಲಗಿಕೊಂಡಳೋ, ಯಾವಾಗ ಎದ್ದು ಹೋದಳೋ ಏನೊಂದೂ ಅವನಿಗೆ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು