Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:4 - ಕನ್ನಡ ಸತ್ಯವೇದವು C.L. Bible (BSI)

4 ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದುಡ್ಡಿನಾಶೆಯಿಂದ ದುಡಿಯಬೇಡ, ಸ್ವಬುದ್ಧಿಯನ್ನೇ ಆಶ್ರಯಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದುಡ್ಡಿನಾಸೆಯಿಂದ ದುಡಿಯಬೇಡ; ಸ್ವಬುದ್ಧಿಯನ್ನೇ ಆಶ್ರಯಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಐಶ್ವರ್ಯವಂತನಾಗಬೇಕೆಂಬ ಪ್ರಯತ್ನದಲ್ಲಿ ನಿನ್ನ ಆರೋಗ್ಯವನ್ನು ಕಳೆದುಕೊಳ್ಳಬೇಡ. ನೀನು ಜ್ಞಾನಿಯಾಗಿದ್ದರೆ ತಾಳ್ಮೆಯಿಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ; ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:4
17 ತಿಳಿವುಗಳ ಹೋಲಿಕೆ  

ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.


“ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.


ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಅವನು ನಿದ್ರಿಸಹೋಗುತ್ತಾನೆ ಹಣವಂತನಾಗಿ ಕಣ್ಣು ತೆರೆಯುತ್ತಲೆ ಇಲ್ಲವಾಗಿರುತ್ತದೆ ಆಸ್ತಿ! ಮತ್ತೆ ಇರುತ್ತಾನೆ ನಿದ್ರೆ ಕಾಣದವನಾಗಿ


ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.


ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ.


ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುವು ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವುವು - ಈ ಮಾತುಗಳನ್ನು ಸಾರುವಂತೆ ಸರ್ವೇಶ್ವರನಿಂದ ನನಗೆ ಅಪ್ಪಣೆಯಾಯಿತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು