Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:12 - ಕನ್ನಡ ಸತ್ಯವೇದವು C.L. Bible (BSI)

12 ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದು ನನಗೆ ಗೊತ್ತಿರಲಿಲ್ಲ ಎಂದು ನೀನು ನೆವ ಹೇಳಿದರೆ ಹೃದಯಶೋಧಕನು ಗ್ರಹಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆಬಿಟ್ಟಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ, ಹೃದಯವನ್ನು ಪರಿಶೋಧಿಸುವ ದೇವರು ಅದನ್ನು ತಿಳಿಯುವದಿಲ್ಲವೋ? ನಿನ್ನ ಜೀವವನ್ನು ಕಾಯುವಾತನು ಅದನ್ನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:12
35 ತಿಳಿವುಗಳ ಹೋಲಿಕೆ  

ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.


ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಪ್ರಭು ಕಾಯುವನು ನಿನ್ನ ಆಗುಹೋಗುಗಳನು I ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು II


ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


“ಥುವತೈರದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಪ್ರಜ್ವಲಿಸುವ ಬೆಂಕಿಯ ಕೆಂಡದಂಥ ಕಣ್ಣುಗಳುಳ್ಳವನೂ ತಾಮ್ರದಂತಿರುವ ಪಾದಗಳುಳ್ಳವನೂ ಆದ ದೇವಪುತ್ರನ ಸಂದೇಶವಿದು:


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I ಕಾಲೆಡವದಂತೆ ಕಾಪಾಡಿದನಯ್ಯಾ II


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ಕಿವಿಮಾಡಿದವನು ಕೇಳದಿರುವನೋ? I ಕಣ್ಣುಕೊಟ್ಟವನು ನೋಡದಿರುವನೋ? II


ಮಾತುಬಲ್ಲವನು ಬದುಕುವನು ಸಂತುಷ್ಟನಾಗಿ; ಕೈಯಿರುವವನು ಬಾಳುವನು ಬಹು ಮಾನಿತನಾಗಿ.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.


ಅನ್ಯಾಯವಾಗಿ ವ್ಯಾಜ್ಯತೀರಿಸುವುದನ್ನೂ ಸ್ವಾಮಿ ಲಕ್ಷ್ಯಕ್ಕೆ ತಂದುಕೊಳ್ಳದೆ ಇರುತ್ತಾನೆಯೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು