Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:9 - ಕನ್ನಡ ಸತ್ಯವೇದವು C.L. Bible (BSI)

9 ಮೂರ್ಖನ ಯೋಜನೆ ಪಾಪಮಯ; ಕುಚೋದ್ಯನು ಜನರಿಂದ ತಿರಸ್ಕೃತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮುರ್ಖನ ಸಂಕಲ್ಪವು ಪಾಪವೇ; ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೂಢನ ಆಲೋಚನೆಗಳೆಲ್ಲಾ ಪಾಪಮಯ. ದುರಾಭಿಮಾನಿಯು ಜನರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬುದ್ಧಿಹೀನನ ಆಲೋಚನೆಯು ಪಾಪಮಯ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:9
16 ತಿಳಿವುಗಳ ಹೋಲಿಕೆ  

ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.


ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?


ಕುಚೋದ್ಯರು ಪಟ್ಟಣಕ್ಕೆ ಬೆಂಕಿ ಹಚ್ಚುವರು; ಜ್ಞಾನಿಗಳೊ ರೋಷಾಗ್ನಿಯನ್ನು ಆರಿಸುವರು.


ಕೇಡನ್ನು ಯೋಚಿಸುವವನು ತುಂಟನು ಎನಿಸಿಕೊಳ್ಳುವನು.


ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ಅವನು ತನ್ನ ಮನದಲ್ಲೆ ಲೆಕ್ಕಿಸುತ್ತಿರುತ್ತಾನೆ “ಉಣ್ಣು, ಕುಡಿ” ಎಂದರೂ; ಅವನಿಗಿಲ್ಲ ನಿನ್ನ ಮೇಲೆ ಅಕ್ಕರೆ.


ಕುಚೋದ್ಯನನ್ನು ಓಡಿಸಿಬಿಟ್ಟರೆ ಜಗಳ ನಿಲ್ಲುವುದು, ವ್ಯಾಜ್ಯ ಮುಗಿಯುವುದು, ನಿಂದೆ ಅವಮಾನ ಇಲ್ಲದಾಗುವುದು.


ದ್ವೇಷವಿದೆ ಎನಗೆ ದ್ವಿಮನಸ್ಕರಲಿ I ಪ್ರೀತಿ ಇದೆ ನಿನ್ನ ಧರ್ಮಶಾಸ್ತ್ರದಲಿ II


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಕುಚೋದ್ಯಗಾರರನ್ನು ಶಿಕ್ಷಿಸುವವನು ತನ್ನನ್ನೆ ಅಪಮಾನಕ್ಕೆ ಗುರಿಮಾಡಿಕೊಳ್ಳುತ್ತಾನೆ. ದುಷ್ಟನನ್ನು ಗದರಿಸುವವನು ತನಗೇ ಕಳಂಕ ತಂದುಕೊಳ್ಳುತ್ತಾನೆ.


ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು