Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:2 - ಕನ್ನಡ ಸತ್ಯವೇದವು C.L. Bible (BSI)

2 ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವಿಷಯವನ್ನು ರಹಸ್ಯಮಾಡುವದು ದೇವರ ಪ್ರಭಾವ; ವಿಷಯವನ್ನು ವಿಮರ್ಶೆಮಾಡುವದು ರಾಜರ ಪ್ರಭಾವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:2
20 ತಿಳಿವುಗಳ ಹೋಲಿಕೆ  

“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ.


ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನೆಲ್ಲಿದ್ದೆ? ಉತ್ತರಕೊಡು, ನೀನು ಅಷ್ಟು ಜ್ಞಾನಿಯಾಗಿದ್ದರೆ.


ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದಂಗೆಯೆಬ್ಬಿಸುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರಗ್ರಂಥದಲ್ಲಿ ಕಂಡುಬರುತ್ತದೆ.


ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದ್ರೋಹಮಾಡುತ್ತಾ,


“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”


“ಅರಸರಿಗೆ ಸರಿತೋರುವುದಾದರೆ, ಜೆರುಸಲೇಮಿನ ಈ ದೇವಾಲಯವನ್ನು ಮರಳಿ ಕಟ್ಟುವುದಕ್ಕೆ ಅರಸ ಸೈರಸನ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ಬಗ್ಗೆ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿನೋಡಬೇಕು. ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.


ಅರಸ ದಾರ್ಯಾವೆಷನ ಆಜ್ಞಾನುಸಾರ ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥ ಸಂಗ್ರಹದಲ್ಲಿ ಹುಡುಕಿನೋಡಿದಾಗ


ಆಕಾಶವು ಉನ್ನತ, ಭೂಮಿಯು ಅಗಾಧ, ಅಂತೆಯೇ ರಾಜರ ಮನಸ್ಸು ಅಗೋಚರ.


ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.


ದಾವೀದನು ಈ ವರ್ತಮಾನ ತಂದ ಯುವಕನಿಗೆ, “ಸೌಲನೂ ಅವನ ಮಗ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದನು.


ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದೆ ಅಲ್ಲವೇ?’ ಎಂದು ಕೇಳಿದನು. ಅದಕ್ಕೆ ಆ ಸ್ತ್ರೀ, “ಅರಸರ ಜೀವದಾಣೆ, ಅರಸರು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ನಿಮ್ಮ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವರು ನಿಮ್ಮ ಸೇವಕನಾದ ಯೋವಾಬನೇ ಹೌದು.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಗೌರವದ ಮೇಲೆ ಗೌರವ ಬಯಸುವುದು ಸರಿಯಲ್ಲ.


ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು