Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:8 - ಕನ್ನಡ ಸತ್ಯವೇದವು C.L. Bible (BSI)

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ, ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ; ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:8
12 ತಿಳಿವುಗಳ ಹೋಲಿಕೆ  

“ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ಹಾಲು ಕಡೆಯುವುದರಿಂದ ಬೆಣ್ಣೆ; ಮೂಗು ಹಿಂಡುವುದರಿಂದ ರಕ್ತ; ಕೋಪ ಎಬ್ಬಿಸುವುದರಿಂದ ಜಗಳ.


ಕಲಹವೆಬ್ಬಿಸುವುದು ಬುದ್ಧಿಹೀನನ ತುಟಿ; ಪೆಟ್ಟಿಗಾಗಿ ಕೂಗಿಕೊಳ್ಳುವುದು ಅವನ ಬಾಯಿ.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಆಗ ಅಬ್ನೇರನು ಯೋವಾಬನನ್ನು ನೋಡಿ, “ಕತ್ತಿ ಯಾವಾಗಲೂ ತಿನ್ನುತ್ತಲೇ ಇರಬೇಕೇ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೇ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದನು.


ಅವರು ತಂದರು. ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು, ಎರಡು ಭಾಗಮಾಡಿ, ಅರ್ಧವನ್ನು ಅವಳಿಗೂ ಅರ್ಧವನ್ನು ಇವಳಿಗೂ ಕೊಡಿ,” ಎಂದು ಅಪ್ಪಣೆಮಾಡಿದನು.


ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು