Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:21 - ಕನ್ನಡ ಸತ್ಯವೇದವು C.L. Bible (BSI)

21 ಕೆಂಡಕ್ಕೆ ಇದ್ದಲುಬೇಕು, ಬೆಂಕಿಗೆ ಸೌದೆ ಬೇಕು; ವ್ಯಾಜ್ಯ ಕೆರಳಿಸಲು ಜಗಳಗಂಟಿ ಇರಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ, ವ್ಯಾಜ್ಯದ ಕಿಚ್ಚನ್ನೆಬ್ಬಿಸುವದಕ್ಕೆ ಜಗಳಗಂಟಿಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕೆಂಡದಿಂದ ಕಲ್ಲಿದ್ದಲು ಉರಿಯುತ್ತದೆ; ಸೌದೆಯಿಂದ ಬೆಂಕಿ ಉರಿಯುತ್ತದೆ; ಅಂತೆಯೇ ಜಗಳಗಂಟರು ವಾಗ್ವಾದವನ್ನು ಮುಂದುವರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹ ಮಾಡುವವನು ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:21
8 ತಿಳಿವುಗಳ ಹೋಲಿಕೆ  

ಕೋಪಿಷ್ಠನು ಜಗಳವೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.


ಹಾಲು ಕಡೆಯುವುದರಿಂದ ಬೆಣ್ಣೆ; ಮೂಗು ಹಿಂಡುವುದರಿಂದ ರಕ್ತ; ಕೋಪ ಎಬ್ಬಿಸುವುದರಿಂದ ಜಗಳ.


ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.


ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II


ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು