Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:24 - ಕನ್ನಡ ಸತ್ಯವೇದವು C.L. Bible (BSI)

24 ಹಗೆಗಾರನ ತುಟಿಯಲ್ಲಿ ಸ್ನೇಹಭಾವದ ನಟನೆ; ಹೊಟ್ಟೆಯಲ್ಲಾದರೊ ಹುದುಗಿದೆ ವಂಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹಗೆಯವನು ತುಟಿಯಲ್ಲಿ ಸ್ನೇಹಭಾವವನ್ನು ನಟಿಸುತ್ತಾನೆ. ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕೆಡುಕನು ತಾನು ಹೇಳುವ ಸಂಗತಿಗಳ ಮೂಲಕ ತನ್ನನ್ನು ಒಳ್ಳೆಯವನನ್ನಾಗಿ ತೋರಿಸಿಕೊಳ್ಳುವನು. ಆದರೆ ಅವನು ತನ್ನ ಕೆಟ್ಟ ಆಲೋಚನೆಗಳನ್ನು ತನ್ನ ಹೃದಯದಲ್ಲಿ ಅಡಗಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಶತ್ರುಗಳು ತಮ್ಮ ತುಟಿಗಳಿಂದ ವೇಷ ಧರಿಸುತ್ತಾರೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:24
17 ತಿಳಿವುಗಳ ಹೋಲಿಕೆ  

ಕೇಡನ್ನು ಕಲ್ಪಿಸುವವರ ಮನದಲ್ಲಿ ಮೋಸ; ಒಳಿತನ್ನು ಬಯಸುವವರ ಮನದಲ್ಲಿ ಉಲ್ಲಾಸ.


ಹೊಟ್ಟೆಯಲ್ಲಿ ಹಗೆ ಇಟ್ಟುಕೊಳ್ಳುವವನು ಸಟೆಗಾರ; ಚಾಡಿ ಹೇಳಿ ಕೇಡುಮಾಡುವುದು ಮೂರ್ಖತನ.


ನೋಡಬರುವರು, ನವಿರಾದ ಮಾತನಾಡುವರವರು I ಕೇಡನೆ ತುಂಬಿಸಿಕೊಂಡು ಹೊರಬಂದೊಡನೆ ಹರಡುವರು II


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಸತ್ಯವಾದಿ ಪ್ರಾಮಾಣಿಕ ಸಾಕ್ಷಿ; ಸುಳ್ಳು ಸಾಕ್ಷಿ ಕಪಟ ವಾಚಾಳಿ.


ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ.


ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.


ಅವನು ತನ್ನ ಮನದಲ್ಲೆ ಲೆಕ್ಕಿಸುತ್ತಿರುತ್ತಾನೆ “ಉಣ್ಣು, ಕುಡಿ” ಎಂದರೂ; ಅವನಿಗಿಲ್ಲ ನಿನ್ನ ಮೇಲೆ ಅಕ್ಕರೆ.


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು;


ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.


ಆಗ ಅಬ್ಷಾಲೋಮನು, “ನೀವು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ನನ್ನೊಡನೆ ಕಳುಹಿಸಿ,” ಎಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.


ಆದರೂ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನೂ ಕಳುಹಿಸಿದನು.


ಅವನು ಅಮಾಸನನ್ನು, “ಸಹೋದರಾ, ಕ್ಷೇಮವೇ?” ಎಂದು ಕೇಳಿ ಮುದ್ದಿಡುವುದಕ್ಕೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯನ್ನು ಇರಿದನು.


ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು. ಅವರಲ್ಲಿ ಸನ್ಬಲ್ಲಟ್ ಮತ್ತು ಗೆಷನರು ನನಗೆ, “ಓನೋ ಕಣಿವೆಯ ಹಕ್ಕೆಫಿರೀಮಿನಲ್ಲಿ ಒಬ್ಬರನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿ ಕಳುಹಿಸಿದರು. ಅವರು ನನಗೆ ಕೇಡು ಬಗೆಯುವವರು ಎಂದು ತಿಳಿಯಿತು.


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು