Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:24 - ಕನ್ನಡ ಸತ್ಯವೇದವು C.L. Bible (BSI)

24 ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸಂಪತ್ತು ಶಾಶ್ವತವಾಗಿರುವದಿಲ್ಲವಷ್ಟೆ; ಕಿರೀಟವು ತಲತಲಾಂತರಗಳವರೆಗೆ ನಿಂತೀತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಐಶ್ವರ್ಯ ಸದಾಕಾಲ ಇರುವಂಥದ್ದಲ್ಲ. ಅಂತೆಯೇ ಸಾಮ್ರಾಜ್ಯಗಳು ಶಾಶ್ವತವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:24
15 ತಿಳಿವುಗಳ ಹೋಲಿಕೆ  

ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II


ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”


ನನ್ನ ಘನತೆಯನ್ನು ಸುಲಿದುಬಿಟ್ಟಿದ್ದಾನೆ ನನ್ನ ಕಿರೀಟವನ್ನು ಕಿತ್ತುಹಾಕಿದ್ದಾನೆ.


ಭಂಗಪಡಿಸಿರುವೆ ದಾಸನೊಡನೆ ಮಾಡಿದ ಒಡಂಬಡಿಕೆಯನು I ಮಣ್ಣುಪಾಲಾಗಿಸಿರುವೆ ಅವನ ಪಟ್ಟದ ಆ ಕಿರೀಟವನು II


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿನ್ನ ರುಮಾಲನ್ನು ಕಿತ್ತುಬಿಡು, ಕಿರೀಟವನ್ನು ತೆಗೆದುಹಾಕು. ಎಲ್ಲವೂ ಮೊದಲಿದ್ದ ಹಾಗೆ ಇರುವುದಿಲ್ಲ; ಕೆಳಗಿರುವುದನ್ನು ಮೇಲೆ ಸೇರಿಸಲಾಗುವುದು, ಮೇಲಿರುವುದನ್ನು ಕೆಳಕ್ಕಿಳಿಸಲಾಗುವುದು.


ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು.


ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.


ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು