Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:12 - ಕನ್ನಡ ಸತ್ಯವೇದವು C.L. Bible (BSI)

12 ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವದು; ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:12
21 ತಿಳಿವುಗಳ ಹೋಲಿಕೆ  

ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.


ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.


ದುಷ್ಟರು ಪ್ರಬಲವಾದರೆ ಜನರು ತಲೆಮರೆಸಿಕೊಳ್ಳುವರು; ದುಷ್ಟರು ನಾಶವಾದರೆ ಶಿಷ್ಟರು ವೃದ್ಧಿಯಾಗುವರು.


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ಓ ನಾಡೇ, ನಿನ್ನ ಒಡೆಯ ಬಾಲಕನಾಗಿದ್ದು ನಿನ್ನ ನಾಯಕರೆಲ್ಲರು ಹೊತ್ತಾರೆಯೇ ಔತಣಕ್ಕೆ ಕುಳಿತುಕೊಳ್ಳುವಂಥವರಾಗಿದ್ದಾರೆ, ಅದು ನಿನ್ನ ದೌರ್ಭಾಗ್ಯವೇ ಸರಿ.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನ ಅರಸನು ಜನರಿಗೆ ಅಪ್ಪಣೆಕೊಟ್ಟನು; ಅವರು ದಾವೀದ - ಸೊಲೊಮೋನರಿಗೂ ಪ್ರಜೆಗಳಾದ ಇಸ್ರಯೇಲರಿಗೂ ಸರ್ವೇಶ್ವರ ಮಾಡಿದ ಉಪಕಾರಗಳನ್ನು ನೆನಸಿಕೊಂಡು, ಆನಂದಭರಿತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದರು.


ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.


ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ತಮಗೆ ತಿಳಿಸಲಾಗಿದೆ ಅಲ್ಲವೆ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಹೋಗಿ ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ?


ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?


ಆಗ ರಾಜ್ಯಾಧಿಕಾರಿಗಳು ಬಾರೂಕನಿಗೆ, ನೀನೂ ಯೆರೆಮೀಯನೂ ಹೊರಟುಹೋಗಿ ಅವಿತುಕೊಳ್ಳಬೇಕು. ನೀವು ಇಲ್ಲಿದ್ದೀರೆಂದು ಯಾರಿಗೂ ಗೊತ್ತಾಗಬಾರದು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು