Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:15 - ಕನ್ನಡ ಸತ್ಯವೇದವು C.L. Bible (BSI)

15 ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:15
19 ತಿಳಿವುಗಳ ಹೋಲಿಕೆ  

ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು; ಅವನನ್ನು ಕೆಣಕುವವನು ಪ್ರಾಣಕ್ಕೆ ಅಪಾಯ ತಂದುಕೊಳ್ವನು.


ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲೆ ಬೀಳುವೆನು. ಅವರ ಎದೆಯನ್ನು ಬಗಿದುಹಾಕುವೆನು. ಮೃಗರಾಜರಂತೆ ಅವರನ್ನು ನುಂಗಿಬಿಡುವೆನು. ಕಾಡುಮೃಗದಂತೆ ಅವರನ್ನು ಸೀಳಿಬಿಡುವೆನು.


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು.


ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.


ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು.


ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.


ಆದ್ದರಿಂದ ಇಸ್ರಯೇಲರ ಬಗ್ಗೆ ಈಜಿಪ್ಟರು ಸಹಿಸಲಾರದಷ್ಟು ಹೆದರಿಕೆ ಉಳ್ಳವರಾದರು. ಇಸ್ರಯೇಲರಿಂದ ಕ್ರೂರತನದಿಂದ ಸೇವೆಮಾಡಿಸಿಕೊಂಡರು.


ಮುರಿದಿಹನು ಸರ್ವೇಶ್ವರ ದುರುಳರಾ ಗದೆಯನು ಮುರಿದಿಹನು ಅರಸರ ರಾಜದಂಡವನು.


ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು