ಜ್ಞಾನೋಕ್ತಿಗಳು 28:2 - ಕನ್ನಡ ಸತ್ಯವೇದವು C.L. Bible (BSI)2 ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು, ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇಶವು ಅಧರ್ಮದಿಂದ ಬಹುನಾಯಕವಾಗುವದು; ಜ್ಞಾನಿಗಳೂ ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು. ಅಧ್ಯಾಯವನ್ನು ನೋಡಿ |