Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:13 - ಕನ್ನಡ ಸತ್ಯವೇದವು C.L. Bible (BSI)

13 ದಲಿತನೂ, ದಬ್ಬಾಳಿಕೆ ನಡೆಸುವವನೂ ಸ್ಥಿತಿಯಲ್ಲಿ ಎದುರುಬದುರು; ಆದರೆ ಸರ್ವೇಶ್ವರನೆ ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಗ್ಗುವವನು ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ; ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಒಂದು ರೀತಿಯಲ್ಲಿ ಬಡವನಿಗೂ ಅವನನ್ನು ಕುಗ್ಗಿಸುವವನಿಗೂ ವ್ಯತ್ಯಾಸವಿಲ್ಲ; ಅವರಿಬ್ಬರಿಗೂ ಜೀವಕೊಟ್ಟಾತನು ಯೆಹೋವನೇ; ಅವರಿಬ್ಬರನ್ನು ಸೃಷ್ಟಿಮಾಡಿದವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:13
10 ತಿಳಿವುಗಳ ಹೋಲಿಕೆ  

ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರು; ಅವರೆಲ್ಲರನ್ನು ಸೃಷ್ಟಿಸಿದಾತ ಸರ್ವೇಶ್ವರನು.


ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II


ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ.


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.


ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಮಗೆ ನೀವು ಪ್ರಸನ್ನರಾಗಿ ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ‌, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು