Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:18 - ಕನ್ನಡ ಸತ್ಯವೇದವು C.L. Bible (BSI)

18 ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದೇವದರ್ಶಕರಿಲ್ಲದಿರುವಲ್ಲಿ ಜನರು ಅಂಕೆಮೀರುವರು; ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿ ತಪ್ಪುತ್ತಾರೆ. ಆದರೆ ದೇವರ ಕಟ್ಟಳೆಗೆ ವಿಧೇಯನಾಗಿರುವವನು ಸಂತೋಷವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:18
21 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ದೈವಾಜ್ಞೆಯನ್ನು ಪಾಲಿಸುವವನು ತನ್ನನ್ನೇ ಕಾಪಾಡಿಕೊಳ್ಳುವನು; ದೈವವಾರ್ತೆಯ ಬಗ್ಗೆ ಅಜಾಗ್ರತನಾಗಿರುವವನು ಸಾಯುವನು.


ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II


ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.


ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.


ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ ಸರ್ವೇಶ್ವರನಿಗೆ ದ್ರೋಹಮಾಡಿದ ಇಸ್ರಯೇಲ ಅರಸ ಅಹಾಜನ ನಿಮಿತ್ತ ಸರ್ವೇಶ್ವರ ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದ್ದರು.


ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II


ಆದ್ದರಿಂದ ಮಕ್ಕಳೇ, ಕಿವಿಗೊಡಿ ನನಗೀಗ ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೆಂಬುದು ನಿಜ.


ಮಾತಿನಿಂದ ಮಾತ್ರ ಸೇವಕನನ್ನು ತಿದ್ದಲಾಗದು; ಮಾತು ಕಿವಿಗೆ ಬಿದ್ದರೂ ಅದನ್ನು ಗ್ರಹಿಸಲಾರದು.


ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು I ದೋಷರಹಿತ ಮಾರ್ಗದಲಿ ನಡೆವವರು ಧನ್ಯರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು