Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:2 - ಕನ್ನಡ ಸತ್ಯವೇದವು C.L. Bible (BSI)

2 ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ; ದುಷ್ಟನ ಆಳಿಕೆ ಜನರಿಗೆ ನರಳಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:2
16 ತಿಳಿವುಗಳ ಹೋಲಿಕೆ  

ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.


ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.


ದುಷ್ಟರು ಪ್ರಬಲವಾದರೆ ಜನರು ತಲೆಮರೆಸಿಕೊಳ್ಳುವರು; ದುಷ್ಟರು ನಾಶವಾದರೆ ಶಿಷ್ಟರು ವೃದ್ಧಿಯಾಗುವರು.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.


ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ಕಂಡೆ. ಅದು ಅಧಿಪತಿಗಳ ತಪ್ಪಿನಿಂದಾದುದು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.


ಭಕ್ತಿಹೀನನು ಜನರನು ಆಳಬಾರದು ಅಂಥವನು ಜನರಿಗೆ ಉರುಲಾಗಬಾರದು.


ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಅದು ಯಾವುದೆಂದರೆ, ಮೂಢರನ್ನು ಮಹಾಪದವಿಗೆ ಏರಿಸುತ್ತಾರೆ; ಘನವಂತರನ್ನು ಹೀನಸ್ಥಿತಿಯಲ್ಲಿ ಇರಿಸುತ್ತಾರೆ.


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು