Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:25 - ಕನ್ನಡ ಸತ್ಯವೇದವು C.L. Bible (BSI)

25 ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:25
38 ತಿಳಿವುಗಳ ಹೋಲಿಕೆ  

ಮನುಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II


“ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಪ್ರಭು : “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II


ದೇವರ ವಾಕ್ಯ ಸ್ಮರಿಸುವವನು ಸುಕ್ಷೇಮದಿಂದ ಬಾಳುವನು; ಸರ್ವೇಶ್ವರನಲ್ಲಿ ಭರವಸೆ ಇಡುವವನು ಭಾಗ್ಯವಂತನು.


ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ;


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಅಲ್ಲಿಯ ಜನರು ಅವನ ಹೆಂಡತಿಯ ವಿಷಯವಾಗಿ ವಿಚಾರಿಸಿದರು. “ಅವಳು ನನ್ನ ತಂಗಿ”, ಎಂದು ಇಸಾಕನು ಹೇಳಿದನು. ರೆಬೆಕ್ಕಳು ಬಲು ಚೆಲುವೆಯಾಗಿದ್ದರಿಂದ ಆಕೆಯ ನಿಮಿತ್ತ ತನ್ನನ್ನು ಕೊಂದಾರು ಎಂದು ಹೆದರಿ ಹಾಗೆ ಹೇಳಿದನು.


ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು.


ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.


ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.


ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.


ಆಗ ಶಿಷ್ಯರು ಹತ್ತಿರಕ್ಕೆ ಬಂದು, “ನಿಮ್ಮ ಮಾತನ್ನು ಕೇಳಿ ಫರಿಸಾಯರು ಬಹಳ ಬೇಸರಗೊಂಡಿದ್ದಾರೆಂದು ನಿಮಗೆ ತಿಳಿಯಿತೇ?’ ಎಂದರು.


ದೇವಾ, ನಾ ನೊಂದುಬೆಂದಿಹೆನಯ್ಯಾ I ಉದ್ಧರಿಸಿ ನನ್ನನು ಕಾಪಾಡಯ್ಯಾ II


ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.


ದಾವೀದನು ತನ್ನ ಕೃತ್ಯವನ್ನು ಜನರು ಹರಡಬಹುದೆಂದು ನೆನೆಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಸ್ತ್ರೀಪುರುಷರನ್ನೆಲ್ಲ ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಅವಧಿಯಲ್ಲಿ ಇದೇ ರೀತಿ ಮಾಡುತ್ತಿದ್ದನು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ನನಗಾಧಾರವಾಗಿರು ಸುರಕ್ಷಿತನಾಗಿರುವೆ I ನಿನ್ನಾ ನಿಬಂಧನೆಗಳಿಗೆ ಸದಾ ಗಮನ ಕೊಡುವೆ II


ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.


ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಕದಗಳ ಮೇಲೆ ಗೀಜುತ್ತಾ ತನ್ನನ್ನು ಹುಚ್ಚನಂತೆ ತೋರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು