Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:2 - ಕನ್ನಡ ಸತ್ಯವೇದವು C.L. Bible (BSI)

2 ಅವು ನಿನ್ನ ದಿನಗಳನ್ನು ಹೆಚ್ಚಿಸುತ್ತವೆ; ನಿನಗೆ ದೀರ್ಘಾಯುಸ್ಸನ್ನು ತರುತ್ತವೆ, ನಿನಗೆ ಸುಕ್ಷೇಮವನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ, ನಿನಗೆ ಸುಕ್ಷೇಮವನ್ನು ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವು ನಿನ್ನ ದಿನಗಳನ್ನು ಹೆಚ್ಚಿಸಿ ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ ನಿನಗೆ ಸುಕ್ಷೇಮವನ್ನುಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವು ನಿನಗೆ ದೀರ್ಘಾಯುಷ್ಯವನ್ನು ನೀಡಿ ಸಂತೋಷ ಸಮಾಧಾನಗಳಿಂದ ಕೂಡಿದ ಜೀವಿತವನ್ನು ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:2
22 ತಿಳಿವುಗಳ ಹೋಲಿಕೆ  

ಮಗನೇ, ನನ್ನ ಮಾತುಗಳನ್ನು ಆಲಿಸಿ ಕೇಳು; ಕೇಳಿದೆಯಾದರೆ ಹೆಚ್ಚುವುವು ನಿನ್ನ ಜೀವನದ ವರ್ಷಗಳು.


ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.


ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ಮಕ್ಕಳ ಮಕ್ಕಳನು ನೀನು ಕಾಣುವಂತಾಗಲಿ I ಇಸ್ರಯೇಲಿನ ಮಕ್ಕಳಿಗೆ ಸುಖಶಾಂತಿ ಲಭಿಸಲಿ II


ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ I ವಿಘ್ನಕರವಾದುದೇನೂ ಇರದು ಅಂಥವರಿಗೆ II


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.


ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶ ಎಷ್ಟುಕಾಲ ನಿಂತಿರುವುದೋ ಅಷ್ಟು ಕಾಲವೂ ನೀವು ಹಾಗು ನಿಮ್ಮ ಸಂತತಿಯವರು ನಿಮ್ಮ ಪಿತೃಗಳಿಗೆ ಸರ್ವೇಶ್ವರ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ನಾಡಿನಲ್ಲಿ ಬಾಳುವಿರಿ.


ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.


ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು