Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:5 - ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನಲ್ಲಿ ಸಂಪೂರ್ಣವಾಗಿ ಭರವಸೆ ಇಡು. ನಿನ್ನ ಸ್ವಂತ ಜ್ಞಾನವನ್ನು ಅವಲಂಬಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:5
24 ತಿಳಿವುಗಳ ಹೋಲಿಕೆ  

ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II


ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಸರ್ವೇಶ್ವರಾ, ಮಾನವನ ಗುರಿಸಾಧನೆ ಅವನ ಸ್ವಾಧೀನದಲ್ಲಿಲ್ಲ. ಸರಿದಿಸೆಯಲ್ಲಿ ಅವನು ಹೆಜ್ಜೆಯಿಡಲಾರನೆಂದು ನಿಮಗೆ ಗೊತ್ತಿದೆಯಲ್ಲಾ.


ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಸರ್ವೇಶ್ವರ ಸ್ವಾಮಿ : “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.


ಸರ್ವೇಶ್ವರನಲ್ಲಿ ನೀನು ಭರವಸೆ ಇಡುವಂತೆ, ಅವುಗಳನ್ನು ತಿಳಿಸಿರುವೆನು ಇಂದೆ.


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.


ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.


ಒಂದೊಂದು ವೇಳೆ ಆ ಮೇಘ ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಸರ್ವೇಶ್ವರನ ಆಜ್ಞಾನುಸಾರ ಅವರು ಹಾಗೆಯೇ ಇಳಿದುಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞಾನುಸಾರವಾಗಿಯೇ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.


ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.


ನಾವು ಈ ಕಾರಣ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಿದೆವು; ಅವರು ನಮಗೆ ಪ್ರಸನ್ನರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು