Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:4 - ಕನ್ನಡ ಸತ್ಯವೇದವು C.L. Bible (BSI)

4 ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಟಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂವಿುಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:4
31 ತಿಳಿವುಗಳ ಹೋಲಿಕೆ  

ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಮೇಘಗಳನ್ನು ನೀರಿನಿಂದ ತುಂಬಿಸಿಹನು ಮೋಡ ಅದರ ಭಾರದಿಂದ ಒಡೆದುಹೋಗದು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಇದು ಮೇಲಣ ಲೋಕದಲ್ಲಿರುವ ಮಾತಲ್ಲ, ‘ನಮಗಾಗಿ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.


ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.


ಆದರೆ ವಿಶ್ವಾಸದ ಮೂಲಕ ದೊರಕುವ ಸತ್ಸಂಬಂಧದ ಬಗ್ಗೆ ಹೀಗೆ ಬರೆಯಲಾಗಿದೆ: “ಕ್ರಿಸ್ತಯೇಸುವನ್ನು ಕೆಳಕ್ಕೆ ಕರೆತರಲು ಸ್ವರ್ಗಕ್ಕೆ ಏರಿಹೋಗುವವರು ಯಾರು?” ಎಂದಾಗಲೀ,


“ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರ ವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ, ನಿಮ್ಮ ದೇವರಾದ ಸರ್ವೇಶ್ವರನೆಂಬ ಮಹಾಮಹಿಮೆಯುಳ್ಳ ಪೂಜ್ಯನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೇ ಹೋದರೆ


ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.


ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


“ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಸರ್ವೇಶ್ವರನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಎಂದನು.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಕಡಲನು ತಳಪಾಯವನಾಗಿಸಿದವನು ಆತನೆ I ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.


ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು


ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?


ಅದು ಆಕಾಶಕ್ಕಿಂತಲೂ ಎತ್ತರ; ನಿನ್ನಿಂದೇನು ಮಾಡಲು ಸಾಧ್ಯ? ಅದು ಪಾತಾಳಕ್ಕಿಂತಲೂ ಆಳ; ನಿನ್ನಿಂದ ಹೇಗೆ ತಿಳಿಯಲು ಸಾಧ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು