Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:21 - ಕನ್ನಡ ಸತ್ಯವೇದವು C.L. Bible (BSI)

21 ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ, ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ. ಆತನು ಮನುಷ್ಯನ ನಡತೆಯನ್ನೆಲ್ಲಾ ಪರೀಕ್ಷಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:21
21 ತಿಳಿವುಗಳ ಹೋಲಿಕೆ  

ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ಆತ ನನ್ನ ನಡತೆಯನ್ನೂ ನೋಡುತ್ತಾನೆ; ನನ್ನ ಹೆಜ್ಜೆಗಳನ್ನೂ ಎಣಿಸುತ್ತಾನಲ್ಲವೆ?


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ಅನುಸರಿಸಿದೆ ನಿನ್ನ ನೇಮನಿಯಮಗಳನೆಲ್ಲ I ನಿನಗೆ ಬಟ್ಟಬಯಲು ನನ್ನ ನಡತೆಯೆಲ್ಲ II


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ಆಗ ನನ್ನ ಹೆಜ್ಜೆಹೆಜ್ಜೆಗಳನು ನೀ ಲೆಕ್ಕಿಸುವೆ ನನ್ನ ಪಾಪ ಹುಡುಕಲು ನೀ ಕಾವಲು ಇಡಲಾರೆ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


“ಥುವತೈರದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಪ್ರಜ್ವಲಿಸುವ ಬೆಂಕಿಯ ಕೆಂಡದಂಥ ಕಣ್ಣುಗಳುಳ್ಳವನೂ ತಾಮ್ರದಂತಿರುವ ಪಾದಗಳುಳ್ಳವನೂ ಆದ ದೇವಪುತ್ರನ ಸಂದೇಶವಿದು:


ನೀ ನಡೆವ ದಾರಿ ಸಮನಾಗಿರಲಿ, ನೀ ಕೈಗೊಳ್ಳುವ ಹಾದಿ ದೃಢವಾಗಿರಲಿ.


ಜೀವಮಾರ್ಗದ ವಿವೇಚನೆ ಅವಳಿಗಿಲ್ಲ. ಅದರ ಅರಿವೂ ಅವಳಿಗಿರುವುದಿಲ್ಲ. ಅವಳ ನಡತೆಯು ಅಷ್ಟು ಚಂಚಲ.


ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು