Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:15 - ಕನ್ನಡ ಸತ್ಯವೇದವು C.L. Bible (BSI)

15 ಆದ್ದರಿಂದ ತಟ್ಟನೆ ಒದಗುವುದು ವಿಪತ್ತು ಮತ್ತೆ ಏಳಲಾಗದಂತಹ ಕಠಿಣ ಆಪತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಅವನಿಗೆ ಆಪತ್ತು ಇದ್ದಕ್ಕಿದ್ದಂತೆ ಬರುವುದು. ಅವನು ನಾಶವಾಗುವನು! ಅವನಿಗೆ ಸಹಾಯಮಾಡಲು ಯಾರೂ ಇರುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಅವನಿಗೆ ವಿಪತ್ತು ಬೇಗ ಬರುವುದು; ಯಾವ ಪರಿಹಾರವಿಲ್ಲದೆ ಅವನು ತಟ್ಟನೆ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:15
15 ತಿಳಿವುಗಳ ಹೋಲಿಕೆ  

ಸರ್ವಶಕ್ತ ಸರ್ವೇಶ್ವರನ ಸಂದೇಶವಿದು - ಕುಂಬಾರ ಮಾಡಿದ ಮಣ್ಣಿನ ಮಡಕೆಯನ್ನು ಒಡೆದುಹಾಕಿದ ಮೇಲೆ ಸರಿಪಡಿಸಲಾಗದು. ಅಂತೆಯೇ ನಾನು ಈ ಜನರನ್ನು ಹಾಗು ನಗರವನ್ನು ಒಡೆದುಹಾಕುವೆನು. ಹೂಣಲು ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಹೆಣಗಳನ್ನು ಈ ತೋಫೆತಿನಲ್ಲೇ ಹೂಣುವರು.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಕಷ್ಟಸಂಕಟಗಳು ನಿಮಗೆ ಸಂಭವಿಸಿದಾಗ ನಿಮ್ಮನ್ನು ಕುರಿತು ನಾನೆ ನಕ್ಕು ಪರಿಹಾಸ್ಯ ಮಾಡುವೆನು.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II


ಆದುದರಿಂದ ಬಿರುಗಾಳಿಯಂತೆ ನಿಮಗೆ ಅಪಾಯಬಂದಾಗ, ತುಫಾನಿನಂತೆ ನಿಮಗೆ ಆಪತ್ತು ಬಂದೊದಗಿದಾಗ,


ಸರ್ವೇಶ್ವರ ಹಗೆಮಾಡುವಂಥಹವು ಆರು: ಆತ ಖಂಡನೆ ಮಾಡುವಂಥಹವು ಏಳು: ಅಹಂಕಾರ ದೃಷ್ಟಿ, ಕಪಟವಾಡುವ ನಾಲಿಗೆ, ನಿರಪರಾಧಿಯನ್ನು ಕೊಲೆಮಾಡುವ ಕೈ, ದುರಾಲೋಚನೆಯನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತವಕಪಡುವ ಕಾಲು, ಅಸತ್ಯವನ್ನು ಉಸುರುವ ಸುಳ್ಳುಸಾಕ್ಷಿ, ಸೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.


ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸೀತು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?


ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ. “ಅಯ್ಯೋ, ಸರ್ವೇಶ್ವರನಾದ ದೇವರೇ, ಇಸ್ರಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲನಮಾಡುವಿರೋ?” ಎಂದು ಮೊರೆಯಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು