Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:23 - ಕನ್ನಡ ಸತ್ಯವೇದವು C.L. Bible (BSI)

23 ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:23
22 ತಿಳಿವುಗಳ ಹೋಲಿಕೆ  

ನಿನ್ನ ವಾಕ್ಯ ನನಗೆ ದಾರಿದೀಪ I ನನ್ನ ಕಾಲಿನ ನಡೆಗೆ ಕೈದೀಪ II


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II


ಹಿತಕರ ಬುದ್ಧಿವಾದಕ್ಕೆ ಕಿವಿಗೊಡುವವನು ಸಜ್ಜನರ ಸತ್ಸಂಘದಲ್ಲಿ ಪಾಲ್ಗೊಳ್ಳುವನು.


ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.


ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.


“ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ.


ಬೆತ್ತ ಬೆದರಿಕೆಗಳು ಜ್ಞಾನ ತರುತ್ತವೆ; ಶಿಕ್ಷಿಸದೆ ಬಿಟ್ಟ ಮಗನು ತಾಯಿಗೆ ತರುತ್ತಾನೆ ಅಪಕೀರ್ತಿ.


ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.


ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II


ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


“ಅಕಟಕಟಾ ಶಿಸ್ತನ್ನೇ ನಾನು ದ್ವೇಷಿಸಿದೆನಲ್ಲಾ! ನನಗೆ ಕೊಡಲಾದ ತಿದ್ದುಪಾಟನ್ನು ತಾತ್ಸಾರಮಾಡಿದೆನಲ್ಲಾ!


“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.


ಜೋಸೆಫನು ಒಪ್ಪಲಿಲ್ಲ. “ನನ್ನ ಒಡೆಯ ತನ್ನ ಆಸ್ತಿಪಾಸ್ತಿಯನ್ನೆಲ್ಲ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ನಾನಿರುವುದರಿಂದ ಮನೆಯ ಎಲ್ಲ ವಿಷಯಗಳಲ್ಲಿ ನಿಶ್ಚಿಂತರಾಗಿದ್ದಾರೆ.


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.


ಅಜ್ಞಾನಿಗಳ ಸ್ತುತಿಗೀತೆಗಿಂತ ಸುಜ್ಞಾನಿಗಳ ಗದರಿಕೆ ಲೇಸು.


ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು