Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:14 - ಕನ್ನಡ ಸತ್ಯವೇದವು C.L. Bible (BSI)

14 ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸದ್ಯೋಚನೆಯೂ ಸುಜ್ಞಾನವೂ ಸಾಮರ್ಥ್ಯವೂ ನನ್ನಲ್ಲಿವೆ; ವಿವೇಕವು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಳ್ಳೆಯ ಆಲೋಚನೆಗಳೂ ಒಳ್ಳೆಯ ತೀರ್ಪುಗಳೂ ನನ್ನವೇ. ವಿವೇಕವೂ ಸಾಮರ್ಥ್ಯವೂ ನನ್ನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:14
19 ತಿಳಿವುಗಳ ಹೋಲಿಕೆ  

ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.


ಜ್ಞಾನೋದಯ ನೀಡಿದವನಾರು ಆತನಿಗೆ? ನ್ಯಾಯಮಾರ್ಗ ತೋರಿಸಿದವನಾರು ಆತನಿಗೆ? ಬುದ್ಧಿ ಕಲಿಸಿದವನಾರು ಆತನಿಗೆ? ಏನೇ ಮಾರ್ಗವನ್ನು ಸೂಚಿಸಿದವನಾರು ಆತನಿಗೆ?


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.


ಬಲವಂತನಿಗಿಂತ ಬುದ್ಧಿವಂತ ಶಕ್ತಿಶಾಲಿ; ಶೂರನಿಗಿಂತ ಜ್ಞಾನಿಯೇ ಬಲಶಾಲಿ.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.


ಮಗನೇ, ಸುಜ್ಞಾನ, ಸದ್ಬುದ್ಧಿಗಳು ನಿನ್ನಲ್ಲಿ ಸ್ಥಿರವಾಗಿರಲಿ; ನಿನ್ನ ಕಣ್ಣುಗಳಿಂದ ಅವು ಮರೆಯಾಗದಿರಲಿ.


ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.


ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು