Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:18 - ಕನ್ನಡ ಸತ್ಯವೇದವು C.L. Bible (BSI)

18 ನನ್ನಲ್ಲಿವೆ ಶ್ರೀಮಂತಿಕೆ ಮತ್ತು ಘನತೆ ಶಾಶ್ವತ ಸಂಪತ್ತು ಹಾಗೂ ಸಮೃದ್ಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನಲ್ಲಿ ಧನಘನತೆಗಳೂ ಶ್ರೇಷ್ಠಸಂಪತ್ತೂ ನೀತಿಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನಲ್ಲಿಯೂ ಸಹ ಕೊಡಲು ಐಶ್ವರ್ಯವಿದೆ ಮತ್ತು ಘನತೆಯಿದೆ. ನಾನು ಶಾಶ್ವತವಾದ ಐಶ್ವರ್ಯವನ್ನೂ ಯಶಸ್ಸನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಐಶ್ವರ್ಯವೂ ಘನತೆಯೂ, ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:18
21 ತಿಳಿವುಗಳ ಹೋಲಿಕೆ  

ದೀರ್ಘಾಯುಷ್ಯ, ಜ್ಞಾನವೆಂಬ ಆಕೆಯ ಬಲಗೈಯಲ್ಲಿದೆ; ಘನತೆ, ಶ್ರೀಮಂತಿಕೆಯೂ ಆಕೆಯ ಎಡಗೈಯಲ್ಲಿವೆ.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.


ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಸಿರಿಸಂಪತ್ತಿರುವುದವನ ಮನೆಯಲಿ ಸಮೃದ್ಧಿಯಾಗಿ I ನೀತಿ ಫಲಿಸುವುದು ಆತನ ಮನದಲಿ ಶಾಶ್ವತವಾಗಿ II


ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II


ಮೌಲ್ಯವೂ ಸುಂದರವೂ ಆದವುಗಳಿಂದ ಅದರ ಕೋಣೆಗಳನ್ನು ತುಂಬಿಸಲು ತಿಳುವಳಿಕೆಯೇ ಉಪಕರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು