Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:6 - ಕನ್ನಡ ಸತ್ಯವೇದವು C.L. Bible (BSI)

6 ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6-7 ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6-7 ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಯನ್ನು ಪಡೆದು ಅದಕ್ಕೆ ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಸಮೃದ್ಧಿಯಾಗಿ ಸುರಿಸಿದನು. ಇದು ನಂಬತಕ್ಕ ಮಾತಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮೂಲಕ ದೇವರು ಪವಿತ್ರಾತ್ಮನನ್ನು ನಮ್ಮ ಮೇಲೆ ಸಮೃದ್ಧಿಯಾಗಿ ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಮಗೆ ರಕ್ಷಕರಾದ ಕ್ರಿಸ್ತ ಯೇಸುವಿನ ಮೂಲಕ ದೇವರು ಪವಿತ್ರಾತ್ಮ ದೇವರನ್ನು ನಮ್ಮ ಮೇಲೆ ಸಮೃದ್ಧವಾಗಿ ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವಾನ್ ಮಾಪ್‍ನಸ್ತಾನಾ ಜೆಜು ಕ್ರಿಸ್ತಾ ಅಮ್ಚ್ಯಾ ಸುಟ್ಕಾ ದಿನಾರ್‍ಯಾಚ್ಯಾ ವೈನಾ ಅಮ್ಚ್ಯಾ ವರ್‍ತಿ ಪವಿತ್ರ್ ಆತ್ಮೊಚ್ ವುತ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:6
19 ತಿಳಿವುಗಳ ಹೋಲಿಕೆ  

“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.


ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು