Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:7 - ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಶೆ, ಅಮಿ ತೆಚ್ಯಾ ಕುರ್ಪೆ ವೈನಾ ರಾಕುನ್ ಹೊತ್ತೆ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಲಿ ಮರ್‍ಯಾದ್ ಅಮ್ಕಾ ಗಾವಿ ಸರ್ಕೆ ದೆವಾಚ್ಯಾ ಇದ್ರಾಕ್ ನಿತಿವಂತ್ ಕರುನ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:7
25 ತಿಳಿವುಗಳ ಹೋಲಿಕೆ  

ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.


ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ಮಾನವನಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ.


ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.


ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


ಆದ್ದರಿಂದ, ದೇವರ ಅನುಗ್ರಹದಿಂದಲೇ ನೀನು ಇನ್ನು ಮನೆಯಾಳಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ನೀನು ವಾರಸುದಾರನೂ ಹೌದು.


ದುಡಿಯುವವನಿಗೆ ದೊರಕುವ ಕೂಲಿ ಉಚಿತ ದಾನವಲ್ಲ; ಅದು ಅವನ ಕಷ್ಟಾರ್ಜಿತ ಸಂಪಾದನೆ.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು