Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 3:9 - ಕನ್ನಡ ಸತ್ಯವೇದವು C.L. Bible (BSI)

9 ಹುರುಳಿಲ್ಲದ ತರ್ಕಗಳಿಂದಲೂ ಉದ್ದುದ್ದ ವಂಶಾವಳಿಗಳಿಂದಲೂ ಕಲಹ ಕಚ್ಚಾಟಗಳಿಂದಲೂ ಧರ್ಮಶಾಸ್ತ್ರವನ್ನು ಕುರಿತಾದ ವಾಗ್ವಾದಗಳಿಂದಲೂ ನೀನು ದೂರವಿರು. ಅವು ನಿಷ್ಪ್ರಯೋಜಕ ಹಾಗೂ ವ್ಯರ್ಥವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ಧರ್ಮಶಾಸ್ತ್ರದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬುದ್ಧಿಯಿಲ್ಲದೆ ಕುತರ್ಕ ಮಾಡುವ ಜನರಿಂದ, ನಿರರ್ಥಕವಾದ ವಂಶಾವಳಿಗಳ ಚರಿತ್ರೆಯ ಬಗ್ಗೆ ಮಾತನಾಡುವ ಜನರಿಂದ, ಮೋಶೆಯು ಬರೆದಿರುವ ಧರ್ಮಶಾಸ್ತ್ರದಲ್ಲಿರುವ ನಿಯಮಗಳ ಬಗ್ಗೆ ತೊಂದರೆಯನ್ನು ಉಂಟುಮಾಡುವ ಮತ್ತು ವಾಗ್ವಾದ ಮಾಡುವ ಜನರಿಂದ ದೂರವಾಗಿರು. ಅವುಗಳಿಗೆ ಯಾವ ಬೆಲೆಯೂ ಇಲ್ಲ, ಅವುಗಳಿಂದ ಜನರಿಗೆ ಯಾವ ಪ್ರಯೋಜನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಘರಾನಾಂಚ್ಯಾ ಸಾಟ್ನಿ ಹೊತ್ತೊ ವಾದ್ ಮೊಯ್ಜೆಚ್ಯಾ ಕರಾರಾಂಚ್ಯಾ ವಿಶಯಾಚೊ ಝಗ್ಡೊ, ವಾದ್ ವಿವಾದ್ ಅನಿ ಪಿಶಾಪಾನಾಚ್ಯಾ ವಾದಾತ್ನಾ ಧುರ್ ರ್‍ಹಾ, ಕಶ್ಯಾಕ್ ಮಟ್ಲ್ಯಾರ್ ತೆಜಾ ವೈನಾ ಕಾಯ್ಬಿ ಫಾಯ್ದೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 3:9
10 ತಿಳಿವುಗಳ ಹೋಲಿಕೆ  

ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.


ಮೂರ್ಖ ಹಾಗೂ ಅನರ್ಥ ವಾಗ್ವಾದಗಳು ಜಗಳಕ್ಕೆ ಕಾರಣಗಳು. ಅವುಗಳ ಗೊಡವೆ ನಿನಗೆ ಬೇಡ.


ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.


ಪ್ರಾಪಂಚಿಕ ಹರಟೆಗಳಿಂದ ದೂರವಿರು. ಅವುಗಳಲ್ಲಿ ಕಾಲಹರಣ ಮಾಡುವವರು ದೇವರಿಂದ ದೂರಸರಿಯುತ್ತಾರೆ.


ಆದ್ದರಿಂದ ಯೆಹೂದ್ಯರ ಕಟ್ಟುಕತೆಗಳಿಗೂ ಸತ್ಯಭ್ರಷ್ಟರಾದವರ ವಿಧಿಗಳಿಗೂ ಕಿವಿಗೊಡದಂತೆ ತೀವ್ರವಾಗಿ ಖಂಡಿಸಿ, ವಿಶ್ವಾಸದಲ್ಲಿ ದೃಢವಾಗಿರುವಂತೆ ಭಕ್ತಾದಿಗಳಿಗೆ ಬೋಧಿಸು.


ಅಂಥವನು ನಿಷ್ಪ್ರಯೋಜಕವಾಗಿ ವಾದಿಸುತ್ತಾನೆಯೆ? ನಿರರ್ಥಕವಾಗಿ ವ್ಯಾಜ್ಯವಾಡುತ್ತಾನೆಯೆ?


ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು